
ಕುಶಾಲನಗರ (ಸೆ.17): ಹೋಂ ಸ್ಟೇ ಮೇಲೆ ದಾಳಿ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ವಿಧಾನಸಭೆ ಶಾಸಕರ ಪುತ್ರ ರಾಜೀವ್ ಸೇರಿದಂತೆ ನಾಲ್ವರಿಗೆ ಇಲ್ಲಿನ ಜೆಎಂಎಫ್ಸಿ ಕೋರ್ಟ್ ಜಾಮೀನು ನೀಡಿದೆ.
ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪಗಳ ಆಧಾರದಲ್ಲಿ ಸೆಪ್ಟೆಂಬರ್ 11ರ ರಾತ್ರಿ ಪೊಲೀಸರು ಕುಶಾಲನಗರದ ಕೂರ್ಗ್ ರಿವರ್ ವ್ಯೂ ಹೋಂ ಸ್ಟೇ ಮೇಲೆ ದಾಳಿ ನಡೆಸಿದ್ದರು.
ಆ ಸಂದರ್ಭದಲ್ಲಿ ತುರುವೇಕೆರೆ ಶಾಸಕ ಕೃಷ್ಣಪ್ಪ ಪುತ್ರ ಕೆ.ರಾಜೀವ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದರು.
ಆರೋಪಿಗಳಿಗೆ ತಲಾ 25 ಸಾವಿರ ಬಾಂಡ್ ಮೇಲೆ ಜಾಮೀನು ನೀಡಿರುವ ದ ಕೋರ್ಟ್, ಪ್ರತಿ ತಿಂಗಳ 2ನೇ ಶನಿವಾರ ಕುಶಾಲನಗರ ಗ್ರಾ. ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.