ಬೆಂಗಳೂರು[ಆ. 02] ಟಿಪ್ಪು ಸುಲ್ತಾನ್ ಜಯಂತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿ ಆದೇಶ ನೀಡಿದೆ. ಇದಾದ ನಂತರದಲ್ಲಿ ಬಕ್ರೀದ್ ಹಬ್ಬಕ್ಕೆ ಭದ್ರತೆ ಕೇಳಿ ಸಿಎಂಗೆ ಪತ್ರ ಬರೆಯಲಾಗಿದೆ.
ಬಕ್ರೀದ್ ಹಬ್ಬದ ಆಚರಣೆ ಹಿನ್ನೆಲೆ ಪೊಲೀಸ್ ಹಾಗೂ ಜಿಲ್ಲಾಡಳಿತದಿಂದ ರಕ್ಷಣೆಗೆ ಮನವಿ ಮಾಡಿರುವ ಶಾಸಕರು ಸೇರಿದಂತೆ ಅಲ್ಪ ಅಸಂಖ್ಯಾತ ಜನಪ್ರತಿನಿಧಿಗಳು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಶಾಸಕ ತನ್ವೀರ್ ಸೇಠ್ ನೇತೃತ್ವದಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪಗೆ ಪತ್ರ ಬರೆಯಲಾಗಿದೆ. ಇದೇ ತಿಂಗಳು 12 ರಂದು ರಾಜ್ಯಾದ್ಯಂತ ಬಕ್ರೀದ್ ಆಚರಣೆ ಮಾಡಲಾಗುತ್ತಿದೆ.
ಎಲ್ಲಾ ಮುಸ್ಲಿಮರು ಹಬ್ಬ ಆಚರಣೆ ಮಾಡಲೇಬೇಕಾಗಿದೆ. ಬಕ್ರೀದ್ ಹಿನ್ನೆಲೆಯಲ್ಲಿ ಪ್ರಾಣಿಗಳ ಸಾಗಾಟಕ್ಕೆ ಅನುವು ಮಾಡಿ ಕೊಡಬೇಕು. ಪೊಲೀಸರು ಪರಿಶೀಲನೆ ಹೆಸರಲ್ಲಿ ತೊಂದರೆ ಕೊಡಬಾರದು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.