
ನವದೆಹಲಿ(ಜೂ.15): ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಬಾಲಾಕೋಟ್ ವಾಯುದಾಳಿ ನಡೆಸಿದ ಕುರಿತು, ವಾಯುದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಪೈಲೆಟ್’ಗಳು ಮಾಹಿತಿ ಬಿಚ್ಚಿಟ್ಟಿದ್ದಾರೆ.
ಬಾಲಾಕೋಟ್ ಉಗ್ರ ನೆಲೆಗಳ ಮೇಲೆ ವಾಯುದಾಳಿ ಮಾಡುವ ನಿರ್ಣಯ ಕೈಗೊಂಡು ಕೇವಲ 90 ಸೆಕೆಂಡ್’ಗಳಲ್ಲಿ ದಾಳಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿತ್ತು ಎಂದು ಹೆಸರು ಹೇಳಲು ಇಚ್ಛಿಸದ ಈ ಪೈಲೆಟ್’ಗಳು ತಿಳಿಸಿದ್ದಾರೆ.
ದಾಳಿಯನ್ನು ಗುಪ್ತವಾಗಿ ಇಡುವ ಉದ್ದೇಶದಿಂದ ತಮ್ಮ ಕುಟುಂಬ ವರ್ಗಕ್ಕೂ ಯೋಜನೆ ಕುರಿತು ಮಾಹಿತಿ ನೀಡಿರಲಿಲ್ಲ ಎಂದು ಪೈಲೆಟ್’ಗಳು ತಿಳಿಸಿದ್ದಾರೆ.
ಅಲ್ಲದೇ ಮರುದಿನ ಬಾಲಾಕೋಟ್ ವಾಯುದಾಳಿ ಕುರಿತು ಸುದ್ದಿ ಬಿತ್ತರವಾದಾಗ, ತನ್ನ ಪತ್ನಿ ಈ ಕುರಿತು ಪ್ರಶ್ನೆ ಕೇಳಿದಾಗಲೂ ತಾವೂ ಮೌನವಹಿಸಿದ್ದಾಗಿ ಪೈಲೆಟ್’ವೋರ್ವ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.