ಗುಡಿಸಲಿನಲ್ಲಿ ವಾಸಿಸುವ ಸಂಸದನಿಗೆ ಮಂತ್ರಿ ಹುದ್ದೆ!

Published : May 31, 2019, 08:22 AM ISTUpdated : May 31, 2019, 08:58 AM IST
ಗುಡಿಸಲಿನಲ್ಲಿ ವಾಸಿಸುವ ಸಂಸದನಿಗೆ ಮಂತ್ರಿ ಹುದ್ದೆ!

ಸಾರಾಂಶ

ತೆಂಗಿನ ಗರಿಯ ಗುಡಿಸಲಲ್ಲಿ ವಾಸವಿರುವ 2 ಬಾರಿ ಶಾಸಕರಾಗಿದ್ದ, ಒಡಿಶಾದ ಬಾಲಸೋರ್‌ನ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಈಗ ಮೋದಿ ಸಂಪುಟದಲ್ಲಿ ಸಚಿವ!

ನವದೆಹಲಿ[ಮೇ.31]: ಒಡಿಶಾದಿಂದ ಮೊದಲ ಬಾರಿಗೆ ಸಂಸತ್ತಿಗೆ ಆಯ್ಕೆ ಯಾದ ಪ್ರತಾಪ್ ಚಂದ್ರ ಸಾರಂಗಿ ಅವರು ಮೋದಿ ಸರ್ಕಾರ ದಲ್ಲಿ ಮಂತ್ರಿಯಾಗಿದ್ದಾರೆ.ವಿಶೇಷವೆಂದರೆ ಇವರು ತಮ್ಮ ಸರಳ ಜೀವನದಿಂದ ಎಲ್ಲರ ಗಮನ ಸೆಳೆದಿದ್ದಾರೆ.

ಗುಡಿಸಲಿನಂತಹ ಸಣ್ಣ ಮನೆಯಲ್ಲಿ ವಾಸಿಸುವ ಇವರು ಸೈಕಲ್‌ನಲ್ಲಿ ಓಡಾಡುತ್ತಾರೆ. ಕೊಳವೆ ಬಾವಿಯ ನೀರಿನಲ್ಲೇ ಸ್ನಾನ ಮಾಡುತ್ತಾರೆ. ಸೈಕಲ್ ಮೂಲಕವೇ ಹಳ್ಳಿ ಹಳ್ಳಿಗೆ ಹೋಗಿ ಮತಯಾಚಿಸಿದ್ದರು.

ಗುಡಿಸಲಲ್ಲಿ ವಾಸ ಮಾಡುವ ಸನ್ಯಾಸಿ ಈಗ ಬಿಜೆಪಿ ಎಂಪಿ

ತಮ್ಮ ಸರಳ ಜೀವನದಿಂದಲೇ ಜನರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿರುವ ಅವರು ಒಡಿಶಾದ ಬಾಲಾಸೋರ್ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆ ಆಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು