ಭಾರತದಲ್ಲಿ ಆಶ್ರಯ ಪಡೆಯಲು ಬಲೂಚ್ ನಾಯಕನ ಇಚ್ಛೆ

Published : Sep 20, 2016, 05:19 AM ISTUpdated : Apr 11, 2018, 12:58 PM IST
ಭಾರತದಲ್ಲಿ ಆಶ್ರಯ ಪಡೆಯಲು ಬಲೂಚ್ ನಾಯಕನ ಇಚ್ಛೆ

ಸಾರಾಂಶ

ಜಿನೆವಾ(ಸೆ.20): ಗಡಿಪಾರಾಗಿರುವ ಬಲೂಚ್ ನಾಯಕ ಬ್ರಹಾಂದಾಘ್ ಬುಗ್ತಿ ಈ ವಾರ ಭಾರತದಲ್ಲಿ ರಾಜಕೀಯ ಆಶ್ರಯ ಪಡೆಯಲು ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ. ಪಾಕಿಸ್ತಾನದ ವಿರುದ್ಧ ಬಲೂಚಿಸ್ತಾನ ಚಳವಳಿ ನಡೆಸುತ್ತಿರುವ ಬುಗ್ತಿಯವರನ್ನು ಇನ್ನಷ್ಟು ಬಲೂಚ್ ನಾಯಕರು ಹಿಂಬಾಲಿಸುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ. ‘‘ನಾವು ಭಾರತದಲ್ಲಿ ಆಶ್ರಯ ಪಡೆಯಲು ಅಲ್ಲಿನ ಸರ್ಕಾರಕ್ಕೆ ಅಧಿಕೃತವಾಗಿ ನಾವು ನಿರ್ಧರಿಸಿದ್ದೇವೆ. ಅರ್ಜಿ ಸಲ್ಲಿಸುವ ಕಾನೂನು ಪ್ರಕ್ರಿಯೆ ಪಾಲಿಸಲಿದ್ದೇವೆ’’ ಎಂದು ಬುಗ್ತಿ ಹೇಳಿದ್ದಾರೆ.

ಪಾಕಿಸ್ತಾನದ ಮಾಜಿ ಹಾಗೂ ಹಾಲಿ ಸೇನಾ ಮುಖ್ಯಸ್ಥರ ವಿರುದ್ಧ ತಾನು ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಮೆಟ್ಟಿಲೇರುತ್ತೇನೆ ಎಂದು ಬಲೂಚ್ ರಿಪಬ್ಲಿಕನ್ ಪಾರ್ಟಿ (ಬಿಆರ್‌ಪಿ)ಯ ನಾಯಕ ಬುಗ್ತಿ ಹೇಳಿದ್ದಾರೆ. ಚೀನಾದ ಮೇಲೂ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದೂರು ದಾಖಲಿಸಲು ಭಾರತ, ಬಾಂಗ್ಲಾದೇಶ್, ಅಫ್ಘಾನಿಸ್ತಾನದ ನೆರವು ಕೋರಲು ತಮ್ಮ ಪಕ್ಷ ನಿರ್ಧರಿಸಿದೆ. ಬಲೂಚ್ ಜನರ ಮೇಲೆ ಹಿಂಸೆ ಎಸಗಲು ಪಾಕಿಸ್ತಾನದೊಂದಿಗೆ ಚೀನಾ ಕೂಡ ಭಾಗಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?
India News Live: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ