
ಬೆಂಗಳೂರು(ಜ.5): ಕಮ್ಮನಹಳ್ಳಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು 48 ಗಂಟೆಗಳಲ್ಲಿ ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಅಯ್ಯಪ್ಪ,ಲಿನೋ,ಸುದೇಶ್, ಸೋಮಶೇಖರ್ ಬಂಧಿತರು. ಅಯ್ಯಪ್ಪ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಆರೋಪಿಗಳಲ್ಲಿ ಮೂವರು ಡೆಲಿವರಿ ಬಾಯ್ಸ್, ಒಬ್ಬ ಕ್ಯಾಬ್ ಚಾಲಕನಾಗಿದ್ದಾನೆ. ಬಂಧಿತರಿಂದ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ. ಮುಖ್ಯ ಆರೋಪಿ ಐಟಿಐ ವ್ಯಾಸಂಗ ಮಾಡಿದ್ದಾನೆ ಇನ್ನುಳಿದ ಆರೋಪಿಗಳನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು. ನಗರದಲ್ಲಿ ಇಂತಹ ಘಟನೆಗಳು ಸಂಭವಿಸಿದರೆ ದೌರ್ಜನ್ಯಕ್ಕೊಳಗಾದವರು ಪೊಲೀಸರಿಗೆ ದೂರು ನೀಡಲು ಹಿಂಜರಿಯಬಾರದು. ಸಾರ್ವಜನಿಕರು ಸಹ ಆರೋಪಿಗಳ ಪತ್ತೆಗೆ ಸಹಕಾರ ನೀಡಬೇಕು ಎಂದು ಆಯುಕ್ತರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.