ಬೆಂಗಳೂರಿನಲ್ಲಿ ಶೂಟೌಟ್ : ಚಿಕಿತ್ಸೆ ಫಲಕಾರಿಯಾಗದೆ ಕಡಬಗೆರೆ ಸೀನ ಸಾವು

Published : Feb 04, 2017, 01:55 PM ISTUpdated : Apr 11, 2018, 12:59 PM IST
ಬೆಂಗಳೂರಿನಲ್ಲಿ ಶೂಟೌಟ್ : ಚಿಕಿತ್ಸೆ ಫಲಕಾರಿಯಾಗದೆ ಕಡಬಗೆರೆ ಸೀನ ಸಾವು

ಸಾರಾಂಶ

ನಿನ್ನೆ ಯಲಹಂಕದ ಕೋಗಿಲು ಬಳಿ ಹೋಂಡ ಸಿಟಿಯಲ್ಲಿ ಸೀನ ಹೋಗುತ್ತಿದ್ದಾಗ ಪಲ್ಸರ್ ಬೈಕ್'ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಈತನ ದೇಹಕ್ಕೆ ಮೂರು ಗುಂಡುಗಳು ತಗುಲಿದ್ದವು. ತಕ್ಷಣ ಈತನನ್ನು ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಂಗಳೂರು(ಫೆ.4): ನಗರದಲ್ಲಿ ನಡೆದ ಫೈರಿಂಗ್​'ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಸೀನ ಅಲಿಯಾಸ್ ಶ್ರೀನಿವಾಸ್ ಮೂರ್ತಿ ಮೃತಪಟ್ಟಿದ್ದಾನೆ. ನಿನ್ನೆ ಯಲಹಂಕದ ಕೋಗಿಲು ಬಳಿ ಹೋಂಡ ಸಿಟಿಯಲ್ಲಿ ಸೀನ ಹೋಗುತ್ತಿದ್ದಾಗ ಪಲ್ಸರ್ ಬೈಕ್'ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಈತನ ದೇಹಕ್ಕೆ ಮೂರು ಗುಂಡುಗಳು ತಗುಲಿದ್ದವು. ತಕ್ಷಣ ಈತನನ್ನು ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೊಟ್ಟೆಗೆ ಗಂಭೀರ ಗಾಯವಾಗಿದ್ದ ಕಾರಣ ಸೀನ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.  ಶ್ರೀನಿವಾಸ್ ಮೂರ್ತಿ ಮೂಲತಃ ನೆಲಮಂಗಲದ ಬಳಿಯ ಮಾದನಾಯಕನಹಳ್ಳಿಯವನು. ಶ್ರೀನಿವಾಸ್ ಮೂರ್ತಿ ಹಾಗೂ ಪಾಯ್ಸನ್ ರಾಮ ಇಬ್ಬರೂ ಅಣ್ಣ- ತಮ್ಮಂದಿರು. ಪಾಯ್ಸನ್ ರಾಮನ ವಿರುದ್ಧ ಈಗಾಗಲೇ 40 ಕೇಸ್'ಗಳು ದಾಖಲಾಗಿದ್ದು, ಇವುಗಳಲ್ಲಿ 38 ಕೇಸ್'ಗಳು ಅಣ್ಣ ಶ್ರೀನಿವಾಸ್ ಮೂರ್ತಿಗಾಗಿ ಮಾಡಿದ್ದು ಎಂದು ತಿಳಿದು ಬಂದಿದೆ. ಈ ಪಾಯ್ಸನ್ ರಾಮ ಅಣ್ಣ ಶ್ರೀನಿವಾಸ್ ಮೂರ್ತಿಯ ಬೆನ್ನೆಲುಬಾಗಿ ನಿಂತಿದ್ದ. ಇವರಿಬ್ಬರೂ ಮಾದನಾಯಕನಹಳ್ಳಿ ಠಾಣೆಯಲ್ಲಿ ರೌಡಿ ಶೀಟರ್ ಪಟ್ಟಿಯಲ್ಲಿದ್ದಾರೆ. ನಿನ್ನೆ ಅಣ್ಣನನ್ನು ನೋಡಲು ಬಂದಾಗ ಪಾಯ್ಸನ್ ರಾಮನನ್ನು ಪೊಲೀಸರು ಬಂಧಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿಗಳ 'ಬೆಳಕಿನ ಹಬ್ಬ'ದಂದೇ ಭಯೋತ್ಪಾದಕ ದಾಳಿ! ಹನುಕ್ಕಾ ಫೆಸ್ಟಿವಲ್ ಮಹತ್ವ, ಇತಿಹಾಸ ತಿಳಿಯಿರಿ
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!