
ಬೆಂಗಳೂರು, [ಸೆ.14]: ಬೆಂಗಳೂರಿನ ಬಾಣಸವಾಡಿಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಗೋವಾದಲ್ಲಿ ಪತ್ತೆಯಾಗಿದ್ದಾರೆ.
9ನೆ ತರಗತಿ ವ್ಯಾಸಾಂಗ ಮಾಡುತ್ತಿದ್ದ 15 ವರ್ಷದ ಅಲೆನ್ ಜಾನ್ ಮಾರ್ಕ್ ಮತ್ತು ಮುಂಜುನಾಥ್ ಲಿಂಗರಾಜಪುರದ ಮನೆಯಿಂದ ಸೆಪ್ಟೆಂಬರ್ 11ರ ಸಂಜೆ ನಾಪತ್ತೆಯಾಗಿದ್ದರು.
ಗೋವಾದಲ್ಲಿ ಈ ಇಬ್ಬರು ವಿದ್ಯಾರ್ಥಿಗಳು ತಿರುಗಾಡುತ್ತಿರುವುದನ್ನು ಗಮನಿಸಿದ ಸ್ಥಳೀಯ ಪೊಲೀಸರು, ವಿಚಾರಣೆ ನಡೆಸಿ ಮಾಹಿತಿ ಕಲೆಹಾಕಿಕೊಂಡ ಬಳಿಕ ಬಾಣಸವಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇಬ್ಬರು ವಿದ್ಯಾರ್ಥಿಗಳನ್ನು ಇದೀಗ ಬಾಣಸವಾಡಿ ಪೊಲೀಸ್ರು ಸುರಕ್ಷಿತವಾಗಿ ಗೋವಾದಿಂದ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಇವರಿಬ್ಬರು ಗೋವಾಕ್ಕೆ ಏಕೆ ಹೋಗಿದ್ದರು ಎನ್ನುವುದಕ್ಕೆ ಕಾರಣ ತಿಳಿದುಬಂದಿಲ್ಲ.
ವಿದ್ಯಾರ್ಥಿಗಳು ನಾಪತ್ತೆ ಸಂಬಂಧ ಆತಂಕಗೊಂಡಿದ್ದ ಪೋಷಕರು ಬಾಸಣವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.