ರಾಜಧಾನಿಯಲ್ಲಿ ಜೋರಾದ ಪ್ರತಿಭಟನೆಯ ಕಾವು: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ

Published : Sep 09, 2016, 08:38 AM ISTUpdated : Apr 11, 2018, 12:43 PM IST
ರಾಜಧಾನಿಯಲ್ಲಿ ಜೋರಾದ ಪ್ರತಿಭಟನೆಯ ಕಾವು: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ

ಸಾರಾಂಶ

ದಿನವಿಡಿ ಸಂಚಾರ ದಟ್ಟಣೆಯಿಂದ ಗಿಜಗುಡುತ್ತಿದ್ದ ಹಲವು ರಸ್ತೆಗಳು ಇಂದು ಬಿಕೋ ಎನ್ನುತ್ತಿವೆ. ಪ್ರಮುಖ ರಸ್ತೆಗಳಲ್ಲಿ ಕನ್ನಡ ಪರ ಸಂಘಟನೆಗಳ ಗುಂಪು ಬೈಕ್ ರ್ಯಾಲಿ ನಡೆಸಿದರು. ಬಂದ್ ಇದ್ದರೂ ಕೆಲವು ಐಟಿ ಕಂಪನಿಗಳು ಕೆಲಸ ನಿರ್ವಹಿಸುತ್ತಿರುವುದಕ್ಕೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು(ಸೆ.9): ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ಖಂಡಿಸಿ ಇಂದು ಹಮ್ಮಿಕೊಂಡಿರುವ ಕರ್ನಾಟಕ ಬಂದ್ ಬಿಸಿ ರಾಜಧಾನಿಯಲ್ಲಿ ಜೋರಾಗಿದೆ. ಸಿಲಿಕಾನ್ ಸಿಟಿಯ ಹಲವು ನಗರಗಳಲ್ಲಿ ಕನ್ನಡ ಪರ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಲ್ಲಿಯವರೆಗೂ ಸಣ್ಣ ಪುಟ್ಟ ಅಹಿತಕರ ಘಟನೆಗಳು ಜರುಗಿದರೂ ದೊಡ್ಡಮಟ್ಟದಲ್ಲಿ ಹಿಂಸಾಚಾರ ನಡೆದ ಬಗ್ಗೆ ದಾಖಲಾಗಿಲ್ಲ.

ದಿನವಿಡಿ ಸಂಚಾರ ದಟ್ಟಣೆಯಿಂದ ಗಿಜಗುಡುತ್ತಿದ್ದ ಹಲವು ರಸ್ತೆಗಳು ಇಂದು ಬಿಕೋ ಎನ್ನುತ್ತಿವೆ. ಪ್ರಮುಖ ರಸ್ತೆಗಳಲ್ಲಿ ಕನ್ನಡ ಪರ ಸಂಘಟನೆಗಳ ಗುಂಪು ಬೈಕ್ ರ್ಯಾಲಿ ನಡೆಸಿದರು. ಬಂದ್ ಇದ್ದರೂ ಕೆಲವು ಐಟಿ ಕಂಪನಿಗಳು ಕೆಲಸ ನಿರ್ವಹಿಸುತ್ತಿರುವುದಕ್ಕೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಚಿತ್ರರಂಗದ ನಟ,ನಟಿಯರು ಹಾಗೂ ತಾಂತ್ರಿಕ ವಲಯದ ಸಿಬ್ಬಂದಿ ಶಿವಾನಂದ ಸರ್ಕಲ್ ಬಳಿಯ ಕರ್ನಾಟಕ ವಾಣಿಜ್ಯ ಮಂಡಳಿಯಲ್ಲಿ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಧರಣಿ ಹಮ್ಮಿಕೊಂಡಿದ್ದರು.

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಹಲವು ಕನ್ನಡ ಪರ ಸಂಘಟನೆಗಳ ಮುಖಂಡರು ಸಾವಿರಾರು ಕಾರ್ಯಕರ್ತರ ಜೊತೆಯಲ್ಲಿ ಮೆರವಣಿಗೆ ಹೊರಟು ಟೌನ್ ಹಾಲ್ ಬಳಿ ಜಮಾವಣೆಯಾಗಿದ್ದಾರೆ. ಸಿಎಂ ನಿವಾಸದ ಬಳಿಯಲ್ಲಿಯೂ ಕೆಲವು ಕಾರ್ಯಕರ್ತರು ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಆದರೆ ಪೊಲೀಸರು ಅವರ ಯತ್ನವನ್ನು ತಡೆದು ಬಂಧನಕ್ಕೊಳಪಡಿಸಿದ್ದಾರೆ.   

              

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ