
ಬೆಂಗಳೂರು [ಜು.12]: ಸಮ್ಮಿಶ್ರ ಸರ್ಕಾರದಲ್ಲಿ ದಿನಕ್ಕೊಬ್ಬರು ಶಾಸಕರು ರಾಜೀನಾಮೆ ನೀಡುತ್ತಿರುವ ಹೊತ್ತಿನಲ್ಲೇ ಗುರುವಾರ ಬಂಗಾರಪೇಟೆ ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ ಅವರು ಸ್ಪೀಕರ್ ಕಚೇರಿಗೆ ಆಗಮಿಸಿ ಅಚ್ಚರಿ ಉಂಟು ಮಾಡಿದರು.
ಗುರುವಾರ ಬೆಳಗ್ಗೆ ಕಚೇರಿಗೆ ಆಗಮಿಸಿದ ಅವರು, ಸ್ಪೀಕರ್ ಆಗಮಿಸದ ಕಾರಣ ಕೆಲಹೊತ್ತು ಕಾದು ಹೊರ ನಡೆದರು. ಬಳಿಕ ಸಿದ್ದರಾಮಯ್ಯ ಅವರು ಸ್ಪೀಕರ್ ಕಚೇರಿಯಲ್ಲಿ ಚರ್ಚೆ ನಡೆಸುತ್ತಿರುವಾಗಲೇ ಕಾಂಗ್ರೆಸ್ ಶಾಸಕರಾದ ಭೀಮಾನಾಯ್ಕ್ ಹಾಗೂ ಬೈರತಿ ಸುರೇಶ್ ಅವರು ಸ್ಪೀಕರ್ ಕಚೇರಿಗೆ ಭೇಟಿ ನೀಡಿದ್ದರು.
ಸಿದ್ದರಾಮಯ್ಯ ಸ್ಪೀಕರ್ ಕಚೇರಿಯಿಂದ ಹೊರಟ ಬೆನ್ನಲ್ಲೇ ಬಿಜೆಪಿ ಶಾಸಕರಾದ ಸಿ.ಟಿ. ರವಿ ಅವರು ಸ್ಪೀಕರ್ ಕಚೇರಿಗೆ ಹೋಗಿ ಚರ್ಚೆ ನಡೆಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸ್ಪೀಕರ್ ಕೆ.ಆರ್. ರಮೇಶ್ಕುಮಾರ್, ನನಗೂ ಹಾಗೂ ಸಿದ್ದರಾಮಯ್ಯ ಅವರಿಗೆ ಏನೂ ಕೆಲಸ ಇರಲಿಲ್ಲ. ಹೀಗಾಗಿ ಲೋಕಾಭಿರಾಮವಾಗಿ ಮಾತನಾಡಿಕೊಂಡು ಕುಳಿತಿದ್ದೆವು. ಸಿ.ಟಿ. ರವಿ ಅವರು ಕೂಡ ಹಾಗೆಯೇ. ಅವರಿಗೂ ಏನೂ ಕೆಲಸ ಇರಲಿಲ್ಲ ಹಾಗಾಗಿ ಬಂದಿದ್ದರು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.