ಎಂಜಿ ರಸ್ತೆಯಲ್ಲಿ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಸುವರ್ಣ ನ್ಯೂಸ್​ ವರದಿಗೆ ಎಚ್ಚೆತ್ತ ಬೆಂಗಳೂರು ಪೊಲೀಸರು

Published : Jan 02, 2017, 09:03 AM ISTUpdated : Apr 11, 2018, 12:41 PM IST
ಎಂಜಿ ರಸ್ತೆಯಲ್ಲಿ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಸುವರ್ಣ ನ್ಯೂಸ್​ ವರದಿಗೆ ಎಚ್ಚೆತ್ತ ಬೆಂಗಳೂರು ಪೊಲೀಸರು

ಸಾರಾಂಶ

ಹೊಸ ವರ್ಷಾಚರಣೆ ವೇಳೆ ಎಂಜಿ ರಸ್ತೆಯಲ್ಲಿ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಬಗ್ಗೆ ಸುವರ್ಣ ನ್ಯೂಸ್​ ವರದಿಗೆ ಎಚ್ಚೆತ್ತ ಬೆಂಗಳೂರು ಪೊಲೀಸರು ಮಾಲಿನಿ ಕೃಷ್ಣ ಮೂರ್ತಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದಾರೆ.  

ಬೆಂಗಳೂರು (ಜ.02): ಹೊಸ ವರ್ಷಾಚರಣೆ ವೇಳೆ ಎಂಜಿ ರಸ್ತೆಯಲ್ಲಿ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಬಗ್ಗೆ ಸುವರ್ಣ ನ್ಯೂಸ್​ ವರದಿಗೆ ಎಚ್ಚೆತ್ತ ಬೆಂಗಳೂರು ಪೊಲೀಸರು ಮಾಲಿನಿ ಕೃಷ್ಣ ಮೂರ್ತಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದಾರೆ.  

ಹೆಚ್ಚುವರಿ ಪೊಲೀಸ್​ ಆಯುಕ್ತೆ ಮಾಲಿನಿ ಕೃಷ್ಣ ಮೂರ್ತಿ,ಕೇಂದ್ರ ವಿಭಾಗದ ನೂತನ ಡಿಸಿಪಿ ಚಂದ್ರಗುಪ್ತ ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಹೊಸ ವರ್ಷದಂದು ಎಂಜಿ ರಸ್ತೆಯಲ್ಲಿ ಕೆಲ ಪುಂಡರು ಯುವತಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಈ ಕುರಿತು ಸುವರ್ಣ ನ್ಯೂಸ್​ ವರದಿ ಪ್ರಸಾರ ಮಾಡಿತ್ತು.

ವರ್ಷಾಚರಣೆ ವೇಳೆ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ  ಬಗ್ಗೆ ಮಾಧ್ಯಮಗಳಲ್ಲಿ ಬಂದ ಸುದ್ದಿ ನೋಡಿದ್ದೇನೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದ್ದೇನೆ. ಇನ್ನಷ್ಟು ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸಬೇಕಾಗಿದೆ.

ಘಟನೆ ನಡೆದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳು ಭದ್ರತೆಗಿದ್ದರು .ಆದರೂ ಈ ರೀತಿಯ ಘಟನೆ ನಡೆದಿದೆ. ಪರಿಶೀಲನೆ ಬಳಿಕ ಸುಮೋಟೋ ದಾಖಲಿಸಿಕೊಳ್ಳುವ ಬಗ್ಗೆ ನಿರ್ಧಾರ  ತೆಗೆದುಕೊಳ್ಳಲಾಗಿದೆ.  ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಈ ಘಟನೆ ನಡೆದಿದೆ.

ದೌರ್ಜನ್ಯಕ್ಕೊಳಗಾದ ಯುವತಿಯರು ಠಾಣೆಗೆ ಬಂದು ದೂರು ಕೊಡಿ. ಟಿವಿ ಚಾನಲ್​ಗಳಲ್ಲಿ ಬಂದ ದೃಶ್ಯಗಳನ್ನು ಪಡೆಯುತ್ತೇವೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!