
ಬೆಂಗಳೂರು: ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿ) ಮೇ 30 ರಿಂದ ಎರಡು ದಿನಗಳ ಕಾಲ ಅಖಿಲ ಭಾರತ ಮಟ್ಟದ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದ್ದು, ಬ್ಯಾಂಕಿಂಗ್ ಸೇವೆಯಲ್ಲಿ ತೀವ್ರತರ ವ್ಯತ್ಯಯವಾಗಲಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ, ಕರ್ಣಾಟಕ, ಸಿಂಡಿಕೇಟ್ ಹಾಗೂ ವಿಜಯಾ ಬ್ಯಾಂಕ್ಗಳ ನೌಕರರು ಮುಷ್ಕರದಲ್ಲಿ ಭಾಗಿಯಾಗುತ್ತಿದ್ದಾರೆ.
ಗ್ರಾಮೀಣ ಬ್ಯಾಂಕ್ಗಳು ಹಾಗೂ ಸಹಕಾರಿ ಬ್ಯಾಂಕ್ಗಳು ಮುಷ್ಕರದಲ್ಲಿ ಭಾಗಿಯಾಗುತ್ತಿಲ್ಲ. ಖಾಸಗಿ ಬ್ಯಾಂಕ್ ಗಳಾದ ಎಚ್ಡಿಎಫ್ಸಿ, ಐಸಿಐಸಿಐ ಹಾಗೂ ಎಸ್ ಬ್ಯಾಂಕ್ಗಳ ನೌಕಕರು ಮುಷ್ಕರದಲ್ಲಿ ಭಾಗಿಯಾಗುವುದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.