
ನವದೆಹಲಿ (ನ.21): ಕೇಂದ್ರ ಸರ್ಕಾರ ಕೈಗೊಂಡಿರುವ ಅಪಮೌಲ್ಯೀಕರಣ ಕ್ರಮವನ್ನು ಟೀಕಿಸಿರುವ ಅಖಿಲ ಭಾರತೀಯ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದೆ.
ಅಪಮೌಲ್ಯೀಕರಣ ಕ್ರಮದಿಂದ ದೇಶದ ಆರ್ಥಿಕತೆಗೆ ದೊಡ್ಡ ಪೆಟ್ಟು ಬಿದ್ದಿದೆ, ಹಲವಾರು ಜೀವಗಳು ಹೋಗಿವೆ ಎಂದಿರುವ ಒಕ್ಕೂಟದ ಉಪಾಧ್ಯಕ್ಷ ಡಿ.ಥಾಮಸ್ ಫ್ರಾಂಕೋ, ಗವರ್ನರ್ ಊರ್ಜಿತ್ ಪಟೇಲ್ ನೈತಿಕ ಹೊನೆ ಹೊತ್ತು ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ನಮ್ಮ ಪ್ರಧಾನಿಯವರಾಗಲಿ ಅಥವಾ ಹಣಕಾಸು ಸಚಿವರಾಗಲಿ ಅರ್ಥಶಾಶ್ತ್ರಜ್ಞರಲ್ಲ, ಅಂತಹುದರಲ್ಲಿ ದೇಶದ ಆರ್ಥಿಕತೆ ಹಾಗೂ ಸಾರ್ವಜನಿಕ ಹಿತಾಸಕ್ತಿ ಕುರಿತು ಸರಿಯಾದ ನಿರ್ಧಾರ ತೆಗೆದುಕೊಳ್ಳುವಲ್ಲಿ ಸಲಹೆ ನೀಡಬೇಕಾದ ಹೊಣೆಗಾರಿಕೆ ರಿಸರ್ವ್ ಬ್ಯಾಂಕಿನಲ್ಲಿರುವ ಆರ್ಥಿಕ ತಜ್ಞರದ್ದು. ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ಗವರ್ನರ್ ವಿಫಲರಾಗಿದ್ದಾರೆ, ಎಂದು ಫ್ರಾಂಕೋ ಹೇಳಿದ್ದಾರೆಂದು ಇಂಡಿಯನ್ ಎಕ್ಸ್’ಪ್ರೆಸ್ ವರದಿ ಮಾಡಿದೆ.
ಬ್ಯಾಂಕುಗಳಲ್ಲಿ ಜನರು ಅಳುತ್ತಿದ್ದಾರೆ, 11 ಬ್ಯಾಂಕ್ ಅಧಿಕಾರಿಗಳು ಕೆಲಸದ ಒತ್ತಡದಿಂದಾಗಿ ಸಾವನಪ್ಪಿದ್ದಾರೆ. ಬ್ಯಾಂಕು ಉದ್ಯೋಗಿಗಳು ವಿರಾಮವನ್ನು ಪಡೆಯದೇ ಸರಾಸರಿ 16-18 ಗಂಟೆಗಳ ಕಾಲ ಕೆಲಸ ಮಾಡಬೇಕಾಗಿದೆ, ಎಂದು ಫ್ರಾಂಕೋ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.