
ಬೆಂಗಳೂರು(ಮೇ 29): ಮೇ 30 ಮತ್ತು ಮೇ 31 ರಂದು ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಬ್ಯಾಂಕಿಂಗ್ ವ್ಯವಹಾರಗಳಿಗೆ ಅಡಚಣೆ ಉಂಟಾಗಲಿದೆ. ಎಟಿಎಂ ಹಾಗೂ ವೇತನ ವಿತ್ ಡ್ರಾ ಮಾಡುವುದರ ಮೇಲೆಯೂ ಬ್ಯಾಂಕ್ ನೌಕರರ ಪ್ರತಿಭಟನೆ ಪರಿಣಾಮ ಬೀರಲಿದ್ದು, ಆನ್ ಲೈನ್ ವಹಿವಾಟನ್ನೇ ಗ್ರಾಹಕರು 2 ದಿನಗಳ ಕಾಲ ನೆಚ್ಚಿಕೊಂಡಿರಬೇಕಾಗುತ್ತದೆ.
ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (ಐಬಿಎ) ಅತ್ಯಲ್ಪ ಶೇ.2 ರಷ್ಟು ವೇತನ ಏರಿಕೆ ಮಾಡುವುದನ್ನು ವಿರೋಧಿಸಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮೇ .5 ರಂದು ಬ್ಯಾಂಕ್ ನೌಕರರೊಂದಿಗೆ ಐಬಿಎ ಮಾತುಕತೆ ನಡೆಸಿತ್ತು. ಈ ಸಭೆಯಲ್ಲಿ ಶೇ.2 ರಷ್ಟು ವೇತನ ಹೆಚ್ಚು ಮಾಡುವುದಾಗಿ ತಿಳಿಸಿತ್ತು. ಎಟಿಎಂ ಗಾರ್ಡ್ ಗಳೂ ಸಹ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಎಟಿಎಂ ಗಳಲ್ಲಿ ಕ್ಯಾಶ್ ವಿತ್ ಡ್ರಾ ಮಾಡುವುದಕ್ಕೆ ಸಮಸ್ಯೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಬ್ಯಾಂಕ್ ನೌಕರರು, ಸಿಬ್ಬಂದಿಗಳು ಪ್ರತಿಭಟನೆ ನಡೆಸುವುದಕ್ಕೂ ಮುನ್ನ ಎಟಿಎಂ ಗಳಲ್ಲಿ ನಗದನ್ನು ತುಂಬಲಾಗುವುದು ಈ ಮೂಲಕ ಗ್ರಾಹಕರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಬ್ಯಾಂಕ್ ಗಳು ಭರವಸೆ ನೀಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.