5 ವರ್ಷದಲ್ಲಿ 61000 ಕೋಟಿ ಬ್ಯಾಂಕಿಂಗ್‌ ಹಗರಣ:ಶ್ರೇತಪತ್ರಕ್ಕೆ ಕಾಂಗ್ರೆಸ್‌ ಆಗ್ರಹ5 ವರ್ಷದಲ್ಲಿ 61000 ಕೋಟಿ ಬ್ಯಾಂಕಿಂಗ್‌ ಹಗರಣ:ಶ್ರೇತಪತ್

Published : Feb 19, 2018, 07:19 AM ISTUpdated : Apr 11, 2018, 01:13 PM IST
5 ವರ್ಷದಲ್ಲಿ 61000 ಕೋಟಿ ಬ್ಯಾಂಕಿಂಗ್‌ ಹಗರಣ:ಶ್ರೇತಪತ್ರಕ್ಕೆ ಕಾಂಗ್ರೆಸ್‌ ಆಗ್ರಹ5 ವರ್ಷದಲ್ಲಿ 61000 ಕೋಟಿ ಬ್ಯಾಂಕಿಂಗ್‌ ಹಗರಣ:ಶ್ರೇತಪತ್

ಸಾರಾಂಶ

ಕಳೆದ 5 ವರ್ಷಗಳಲ್ಲಿ ದೇಶದಲ್ಲಿ ನಡೆದ 61,000 ಕೋಟಿ ರು. ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಕಾಂಗ್ರೆಸ್‌, ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

ನವದೆಹಲಿ: ಕಳೆದ 5 ವರ್ಷಗಳಲ್ಲಿ ದೇಶದಲ್ಲಿ ನಡೆದ 61,000 ಕೋಟಿ ರು. ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಕಾಂಗ್ರೆಸ್‌, ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ. ಬಿಜೆಪಿ ನೇತೃತ್ವದ ಸರ್ಕಾರದ ಉನ್ನತ ನಾಯಕರಿಗೆ, ವಂಚಕರ ನಂಟು ಇದೆ. ಪಿಎನ್‌ಬಿ ಹಗರಣದ ಬಳಿಕ ಇನ್ನೊಂದು ಬ್ಯಾಂಕಿಂಗ್‌ ಹಗರಣ ಇದೀಗ ಬೆಳಕಿಗೆ ಬಂದಿದ್ದು, ಬ್ಯಾಂಕಿಂಗ್‌ ವಂಚನೆ ಜಾಕ್‌ ರಾಬಿನ್‌ಸನ್‌ (ವೇಗಕ್ಕೆ ಹೋಲಿಸುವ ಕಾಲ್ಪನಿಕ ವ್ಯಕ್ತಿ)ಗಿಂತ ವೇಗವಾಗಿ ಹಬ್ಬುತ್ತಿದೆ.

ರೊಟೊಮಿಕ್‌ ಪೆನ್ಸ್‌ ಕಂಪನಿಯ ಸಿಇಒ ವಿಕ್ರಮ್‌ ಕೊಠಾರಿ ಭಾರತೀಯ ಬ್ಯಾಂಕುಗಳಿಗೆ 800 ಕೋಟಿ ರು. ವಂಚಿಸಿ ತಲೆ ಮರೆಸಿಕೊಂಡಿದ್ದಾರೆ. ಕಳೆದ 5 ವರ್ಷಗಳಲ್ಲಿ 61,260 ಕೋಟಿ ರು.ನಷ್ಟುಬ್ಯಾಂಕಿಂಗ್‌ ವಂಚನೆ ನಡೆದಿದೆ. ವಂಚಕರು ಬಿಜೆಪಿಯ ಉನ್ನತಾಧಿಕಾರದ ಜೊತೆ ಸಂಬಂಧ ಹೊಂದಿದ್ದಾರೆ. ಇದು ಭಾರತದ ಸದೃಢ ಆರ್ಥಿಕತೆಯ ಬಗ್ಗೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಕಾಂಗ್ರೆಸ್‌ ಮುಖಂಡ ಮನೀಶ್‌ ತಿವಾರಿ ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂದಿನ ಚುನಾವಣೆಗೆ ನಾನು ನಿಲ್ಲದಿದ್ದರೂ ಸರಿ, ಆರ್.ಅಶೋಕ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಿ ಸೋಲಿಸಿಯೇ ಸಿದ್ಧ!
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಬಿಗ್ ರಿಲೀಫ್; ಸಿಬಿಐ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು