ಬನ್ಸಾಲ್ ಕುಟುಂಬ ಆತ್ಮಹತ್ಯೆ: ಕಪ್ಪು ಹಣವೇ ಕಾರಣವಾಯ್ತಾ ಆತ್ಮಹತ್ಯೆಗೆ?

Published : Oct 03, 2016, 12:41 PM ISTUpdated : Apr 11, 2018, 12:47 PM IST
ಬನ್ಸಾಲ್ ಕುಟುಂಬ ಆತ್ಮಹತ್ಯೆ: ಕಪ್ಪು ಹಣವೇ ಕಾರಣವಾಯ್ತಾ ಆತ್ಮಹತ್ಯೆಗೆ?

ಸಾರಾಂಶ

ನವದೆಹಲಿ (ಅ.03):  ಉನ್ನತ ಅಧಿಕಾರಿ ಬಿ.ಕೆ ಬನ್ಸಾಲ್ ಹಾಗೂ ಅವರ ಪುತ್ರ ಯೋಗೇಶ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದ್ದು  ಯೋಗೇಶ್  ಸುಮಾರು 2.4 ಕೋಟಿ ಕಪ್ಪುಹಣ ಹೊಂದಿದ್ದರು ಎಂದು ತೆರಿಗೆ ಅಧಿಕಾರಿಗಳು ಇಂದು ಬಹಿರಂಗಪಡಿಸಿದ್ದಾರೆ.

ಬನ್ಸಾಲ್ ಪತ್ನಿ ಮತ್ತು ಪುತ್ರಿ ಇಬ್ಬರೂ ಜುಲೈನಲ್ಲಿ ನೇಣಿಗೆ ಶರಣಾಗಿದ್ದರು. ಅದಾದ ಕೆಲ ದಿನಗಳ ಬಳಿಕ ಔಷಧೀಯ ಕಂಪನಿಯೊಂದರಿಂದ ಬನ್ಸಾಲ್ ಲಂಚ ಪಡೆದಿದ್ದರು ಎನ್ನುವ ಆರೋಪದ ಮೇರೆಗೆ ಅವರನ್ನು ಬಂಧಿಸಲಾಗಿತ್ತು.

ಬನ್ಸಾಲ್ ಇಡೀ ಕುಟುಂಬ ಆತ್ಮಹತ್ಯೆಗೆ ಶರಣಾಗಿರುವುದು ತನಿಖಾಧಿಕಾರಿಗಳನ್ನು ದಿಗಿಲುಗೊಳಿಸಿದ್ದು, ಸಿಬಿಐನವರು ನಿಜವಾಗಿಯೂ ಬನ್ಸಾಲ್ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದರಾ ಅನ್ನೋದನ್ನ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಯೋಗೇಶ್ ಬನ್ಸಾಲ್ ಕಪ್ಪುಹಣವನ್ನು ತೆರಿಗೆ ಅಧಿಕಾರಿಗಳ ಬಳಿ ಬಹಿರಂಗಪಡಿಸದೇ ಇದ್ದದ್ದೇ ಆತ್ಮಹತ್ಯೆಗೆ ಕಾರಣವಾಯಿತಾ ಎಂದು ಸಿಬಿಐ ಅನುಮಾನ ವ್ಯಕ್ತಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ
ಓಲಾ ಸ್ಕೂಟರ್ಸ್‌ ಮಾತ್ರವಲ್ಲ, ಸರ್ವೀಸ್‌ ವಿಚಾರದಲ್ಲಿ ಮೋಟಾರ್‌ಸೈಕಲ್‌ದೂ ಅದೇ ಕಥೆ!