
ನವದೆಹಲಿ[ಫೆ.18] ಪುಲ್ವಾಮ ದಾಳಿಯ ಬಳಿಕ ಟ್ವಿಟರ್ ನಲ್ಲಿ ಬರೆದುಕೊಂಡಿದ್ದ ಬರ್ಖಾ ದತ್ ಬರೆದುಕೊಂಡಿದ್ದರ ಬಗ್ಗೆಯೂ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಅಭದ್ರತೆಯ ಭಾವ ಎದುರಿಸುತ್ತಿರುವ ಯಾವುದೇ ಕಾಶ್ಮೀರಿಗಳ ಸಹಾಯಕ್ಕಾಗಿ ತಮ್ಮ ಮನೆಯ ಬಾಗಿಲು ಎಂದಿಗೂ ತೆರೆದಿರುತ್ತದೆ" ಎಂದು ಹೇಳಿದ್ದರು.
ಆದರೆ ಇದು ಮತ್ತೊಂದು ತಿರುವನ್ನು ಪಡೆದುಕೊಂಡಿದೆ. ಬರ್ಖಾ ದತ್ ಅವರ ಫೋನ್ ನಂಬರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಪರಿಣಾಮ ಅನೇಕರು ಅಶ್ಲೀಲ ಸಂದೇಶ ರವಾನಿಸಲು ಆರಂಭಿಸಿದ್ದಾರೆ. ಕೆಲವರು ಪುರುಷನ ಜನನಾಂಗದ ಪೋಟೋ ಕಳಿಸಿದ್ದಾರೆ.
ಈ ಬಗ್ಗೆ ದತ್ ದೆಹಲಿ ಪೊಲೀಸರ ನೆರವನ್ನು ಕೇಳಿದ್ದಾರೆ. ಟ್ವಿಟರ್ನಲ್ಲಿ ಈ ಬಗ್ಗೆ ಸ್ವತಃ ದತ್ ಅವರೇ ಬರೆದುಕೊಂಡಿದ್ದಾರೆ. ಇದಕ್ಕೂ ಸಹ ಜನರು ವಿಭಿನ್ನವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.