
ನವದೆಹಲಿ[ಫೆ.20] ಪುಲ್ವಾಮ ದಾಳಿಯ ಬಳಿಕ ಟ್ವಿಟರ್ ನಲ್ಲಿ ಬರೆದುಕೊಂಡಿದ್ದ ಬರ್ಖಾ ದತ್ ಬರೆದುಕೊಂಡಿದ್ದರ ಬಗ್ಗೆಯೂ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಅಭದ್ರತೆಯ ಭಾವ ಎದುರಿಸುತ್ತಿರುವ ಯಾವುದೇ ಕಾಶ್ಮೀರಿಗಳ ಸಹಾಯಕ್ಕಾಗಿ ತಮ್ಮ ಮನೆಯ ಬಾಗಿಲು ಎಂದಿಗೂ ತೆರೆದಿರುತ್ತದೆ ಎಂದು ದತ್ ಹೇಳಿದ್ದರು.
ಅದ್ಯಾವುದೋ ಕಾರಣಕ್ಕೆ ದತ್ ಅವರ ದೂರವಾಣಿ ಸಂಖ್ಯೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಪರಿಣಾಮ ಸಾವಿರಾರು ಸಂದೇಶಗಳು ಬರತೊಡಗಿವೆ. ಅದರಲ್ಲಿಯೂ ಕೆಲ ಅಶ್ಲೀಲ ಸಂದೇಶಗಳನ್ನು ಅನಿವಾರ್ಯವಾಗಿ ದತ್ ಸಹಿಸಿಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಹೇಳಿಕೆ ತಂದ ಎಡವಟ್ಟು, ಬರ್ಖಾ ದತ್ ವಾಟ್ಸಪ್ಗೆ ಪುರುಷ ಜನನಾಂಗದ ಚಿತ್ರ ಕಳಿಸಿದ ಭೂಪ
ನಗ್ನ ಚಿತ್ರಗಳು, ಲೈಂಗಿಕ ಶೋಷಣೆ ಮಾಡುವ ಸಂದೇಶಗಳು ದತ್ ಮೊಬೈಲ್ಗೆ ಬರುತ್ತಲೇ ಇವೆ. ದತ್ ಈ ಬಗ್ಗೆ ಟ್ವೀಟ್ ಮಾಡಿ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.