ನನಗೆ ಸಚಿವ ಸ್ಥಾನ ತಪ್ಪಲು ಕಾಂಗ್ರೆಸ್ ಕಾರಣ : ಜೆಡಿಎಸ್ ನಾಯಕ ಆಕ್ರೋಶ

Published : Jun 16, 2018, 09:38 PM IST
ನನಗೆ ಸಚಿವ ಸ್ಥಾನ ತಪ್ಪಲು ಕಾಂಗ್ರೆಸ್ ಕಾರಣ : ಜೆಡಿಎಸ್ ನಾಯಕ ಆಕ್ರೋಶ

ಸಾರಾಂಶ

ಬೇಷರತ್ ಬೆಂಬಲ ಎಂದು ಕಾಂಗ್ರೆಸಿಗರಿಂದ ನಿತ್ಯ ಕಿರುಕುಳ ಉತ್ತರ ಕರ್ನಾಟಕದ ಕಡೆಗಣನೆ ಸಿಎಂ ಹಾಗೂ ಜೆಡಿಎಸ್ ವರಿಷ್ಠರಿಗೆ ನಿತ್ಯ ಒತ್ತಡ

ಹುಬ್ಬಳ್ಳಿ[ಜೂ.16]: ಕಾಂಗ್ರೆಸ್ ನಾಯಕರ ಒತ್ತಡದ ಕಾರಣದಿಂದ ನನಗೆ ಸಚಿವ ಸ್ಥಾನ ತಪ್ಪಿರುವ ಸಾಧ್ಯತೆಯಿದೆ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದ ನಂತರ ಬೇಷರತ್ ಬೆಂಬಲ ಎಂದಿದ್ದ ಕಾಂಗ್ರೆಸ್ ನಾಯಕರು ಷರತ್ತುಗಳ ಮೇಲೆ ಷರತ್ತುಗಳನ್ನು ವಿಧಿಸುತ್ತಿದ್ದಾರೆ. ಇವರ ಷರತ್ತುಗಳಿಂದ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಗೆ ಉಸಿರಾಡಲು  ಸಾಧ್ಯವಾಗುತ್ತಿಲ್ಲ ಎಂದು ಕೈ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು.

ನನಗೆ ಸಚಿವ ಸ್ಥಾನ ನೀಡಲು ನಾನು ಕೂಡ ಬಯಸಿದ್ದೆ.  ಆಪ್ತರು ನನಗೇ ಸಿಗಬಹುದು ಎಂಬ ಆಶಯ ವ್ಯಕ್ತಪಡಿಸಿದ್ದರು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೂಡ ಉತ್ತರ ಕರ್ನಾಟಕಕ್ಕೆ ಒಲವು ನೀಡಲು ಮುಂದಾಗಿದ್ದರು. ಆದರೆ ಕೈ ಮುಖಂಡರ  ಹಸ್ತಕ್ಷೇಪದಿಂದ ಸಚಿವಸ್ಥಾನ ಕೈತಪ್ಪಿದೆ. ಇದೇ ರೀತಿ ಮುಂದುವರಿದರೆ ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು ಏಳಬಹುದು ಎಂದು ಎಚ್ಚರಿಕೆ ನೀಡಿದರು.

ಹೆಚ್ಡಿಕೆಗೆ ಅಖಂಡ ಕರ್ನಾಟಕದ ಮೇಲೆ ಪ್ರೀತಿ
ಜೆಡಿಎಸ್ ದಕ್ಷಿಣ ಕರ್ನಾಟಕದಲ್ಲಿ 28 ಸ್ಥಾನಗಳನ್ನು ಗೆದ್ದಿದೆ. ಉತ್ತರದಲ್ಲಿ ಗೆದ್ದಿರುವುದು ಕಡಿಮೆ. ಉತ್ತರ ಕರ್ನಾಟಕದ ಮೇಲೆ ಮುಖ್ಯಮಂತ್ರಿಗಿರುವ ಕಾಳಜಿಯನ್ನು ಕಾಂಗ್ರೆಸಿನವರು ಸ್ವತಂತ್ರವಾಗಿ ಬಿಡಬೇಕಿದೆ. ಆದರೆ ಪದೇಪದೆ ಅಡ್ಡಿ ನೀಡುತ್ತಿದ್ದಾರೆ. ಇದೇ ರೀತಿ ಮುಂದುವರಿದರೆ ಸರ್ಕಾರ 5 ವರ್ಷ ಪೂರ್ಣಗೊಳಿಸುವುದು ಕಷ್ಟ ಎಂದು ಮೈತ್ರಿ ಪಕ್ಷದ ವಿರುದ್ಧ ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಿ: ಸಿಎಂಗೆ ಮಹಿಳಾ ಆಯೋಗ ಮನವಿ
ಬಿಪಿಎಲ್ ಕಾರ್ಡ್‌ನ 2.95 ಲಕ್ಷ ಅರ್ಜಿ ವಿಲೇವಾರಿ: ಮುನಿಯಪ್ಪ