
ತುಮಕೂರು: ಮಾಜಿ ಸಂಸದ ಜಿ.ಎಸ್.ಬಸವರಾಜು ಅವರೇ ಮುಂಬರುವ ಲೋಕಸಭಾ ಚುನಾವಣಾ ಅಭ್ಯರ್ಥಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಪ್ರಚಾರ ಸಭೆ ಯಲ್ಲಿ ಅವರು, ನಿಮ್ಮೆಲ್ಲರ ಆಶೀರ್ವಾದದಿಂದ ಮುಂದೆ ಸಂಸದರಾಗಲಿರುವ ಜಿ.ಎಸ್.ಬಸವರಾಜು ಅವರೇ ಎಂದೇ ಭಾಷಣ ಆರಂಭಿಸಿದರು. ಈ ಮೂಲಕ ಲೋಕಸಭಾ ಚುನಾವಣೆಗೆ ಸೊಗಡು ಶಿವಣ್ಣ ಅವರಿಗೆ ಟಿಕೆಟ್ ಇಲ್ಲ ಎನ್ನುವ ಸಂದೇಶ ರವಾನಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿದ ಸೊಗಡು ಶಿವಣ್ಣ ಬೆಂಬಲಿಗರು ಲೋಕಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು.
ಎರಡು ವರ್ಷಗಳಿಂದ ಬಿಜೆಪಿ ವರಿಷ್ಠರ ಜೊತೆ ಮುನಿಸಿಕೊಂಡಿದ್ದ ಶಿವಣ್ಣ ಪಕ್ಷದ ಚಟುವಟಿಕೆಯಿಂದ ದೂರವೇ ಉಳಿದಿದ್ದರು. ಭಾನುವಾರವೂ ಅವರು ಕಾರ್ಯ ಕ್ರಮಕ್ಕೆ ಗೈರಾಗಿದ್ದರು. ಈಗ ಮಾಜಿ ಸಂಸದರಿಗೆ ಟಿಕೆಟ್ ಘೋಷಿಸಿರುವುದು ಜಿಲ್ಲಾ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.