
ಬೆಂಗಳೂರು(ಸೆ. 28): ತಾನು ಮೇಯರ್ ಆದರೆ ಪ್ರಾಮಾಣಿಕವಾಗಿ ಜನರ ಸೇವೆ ಮಾಡುತ್ತೇನೆ ಎಂದು ಬಿಬಿಎಂಪಿ ಮೇಯರ್ ಸ್ಪರ್ಧಿ ಕಾಂಗ್ರೆಸ್ ಕಾರ್ಪೊರೇಟರ್ ಪದ್ಮಾವತಿ ಭರವಸೆ ನೀಡಿದ್ದಾರೆ. ಇಂದು ಚುನಾವಣೆಗೆ ಮುನ್ನ ಸುವರ್ಣನ್ಯೂಸ್ ವರದಿಗಾರ ಜಿ.ಮಧುಸೂದನ್ ಅವರೊಂದಿಗೆ ನೀಡಿದ ಕಿರು ಸಂದರ್ಶನದಲ್ಲಿ ಮಾತನಾಡಿದ ಪದ್ಮಾವತಿ, ತಮಗೆ ಮುಖ್ಯಮಂತ್ರಿಗಳು ನೀಡುವ ಜವಾಬ್ದಾರಿಯನ್ನು ನಿರ್ವಹಿಸಲು ಬದ್ಧಳಾಗಿದ್ದೇನೆಂದು ಹೇಳಿದ್ದಾರೆ. ಕಾಂಗ್ರೆಸ್'ನ ಸೌಮ್ಯ ಶಿವಕುಮಾರ್ ಅವರು ಮತ್ತೊಬ್ಬ ಮೇಯರ್ ಸ್ಪರ್ಧಾಳುವಾಗಿದ್ದಾರೆ. ಮೂಲಗಳ ಪ್ರಕಾರ, ಪದ್ಮಾವತಿಯವರೇ ಮೇಯರ್ ಆಗಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.