ಯಾರಾಗ್ತಾರೆ ಮೇಯರ್..? ಕುತೂಹಲ ಕೆರಳಿಸಿದೆ ಬಿಬಿಎಂಪಿ ಮೇಯರ್ ಚುನಾವಣೆ

Published : Sep 28, 2017, 08:21 AM ISTUpdated : Apr 11, 2018, 12:57 PM IST
ಯಾರಾಗ್ತಾರೆ ಮೇಯರ್..? ಕುತೂಹಲ ಕೆರಳಿಸಿದೆ ಬಿಬಿಎಂಪಿ ಮೇಯರ್ ಚುನಾವಣೆ

ಸಾರಾಂಶ

ನೂತನ ಬಿಬಿಎಂಪಿ ಮೇಯರ್ ಯಾರಾಗ್ತಾರೆ ಅನ್ನೋ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆ ಆಗ್ತಾರೆ ಅನ್ನೋವಷ್ಟರಲ್ಲಿ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಲು ಮುಂದಾಗಿದ್ದು, ಇಂದಿನ ಚುನಾವಣ ಕಣವನ್ನು ಮತ್ತಷ್ಟು ರಂಗೇರಿಸಿದೆ.

ಬೆಂಗಳೂರು(ಸೆ.28): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೂತನ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ  ಇಂದು ಚುನಾವಣೆ ಈ ಬಾರಿಯೂ ಜೆಡಿಎಸ್ ಜೊತೆ ಹೆಜ್ಜೆ ಹಾಕಲು ಕಾಂಗ್ರೆಸ್ ಸಿದ್ಧವಾಗಿದೆ. ಕಾಂಗ್ರೆಸ್ ಗೆ ಮೇಯರ್ ಸ್ಥಾನ ಹಾಗೂ ಜೆಡಿಎಸ್​​ಗೆ ಉಪಮೇಯರ್ ಸ್ಥಾನ ಫಿಕ್ಸ್ ಆಗಿದೆ.

ತೀವ್ರ ಪೈಪೋಟಿ ನಡುವೆ  ಇಂಧನ ಸಚಿವ ಡಿಕೆ ಶಿವಕುಮಾರ್ ಪರಮಾಪ್ತ ಡಿಜೆಹಳ್ಳಿ ಕಾರ್ಪೊರೇಟರ್ ಸಂಪತ್ ರಾಜ್ ಹೆಸರನ್ನು ಮೇಯರ್ ಸ್ಥಾನಕ್ಕೆ ಫೈನಲ್ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಇದುವರೆಗೂ ಸುಮ್ಮನಿದ್ದ್ದ ಬಿಜೆಪಿ ಕೊನೇ ಕ್ಷಣದಲ್ಲಿ ಜೆಡಿಎಸ್-ಕಾಂಗ್ರೆಸ್​ಗೆ ಶಾಕ್ ನೀಡಿದೆ. ಮುನಿಸ್ವಾಮಿ ಅವರನ್ನು ಮೇಯರ್ ಅಭ್ಯರ್ಥಿಯಾಗಿ, ಮಮತ ವಾಸುದೇವ್ ಅವರನ್ನು ಉಪಮೇಯರ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

ಒಟ್ಟು ಮತಗಳು- 266

ಮ್ಯಾಜಿಕ್ ನಂಬರ್- 134

ಇನ್ನೂ  ಪಾಲಿಕೆಯ 198 ಸದಸ್ಯರು ಸೇರಿದಂತೆ ಒಟ್ಟು 266 ಮಂದಿ ಮತದಾನ ಮಾಡಲಿದ್ದಾರೆ. ಮ್ಯಾಜಿಕ್ ನಂಬರ್ 134, ಪಕ್ಷಗಳ ಬಲಾಬಲ ನೋಡುವುದಾದರೆ ಕಾಂಗ್ರೆಸ್ 109, ಜೆಡಿಎಸ್ 24, ಬಿಜೆಪಿ 126 ಸದಸ್ಯರನ್ನ ಹೊಂದಿದರೆ. 7 ಮಂದಿ ಪಕ್ಷೇತರರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ.

ಬೆಳಗ್ಗೆ 8ರಿಂದ ಚುನಾವಣಾ ಪ್ರಕ್ರಿಯೆಗಳು ನಡೆಯಲಿದ್ದು.. 11.30ಕ್ಕೆ  ಮತದಾನ ಕೈ ಎತ್ತುವ ಮೂಲಕ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಒಟ್ಟಿನಲ್ಲಿ , ಯಾರಾಗ್ತಾರೆ ಮೇಯರ್, ಉಪಮೇಯರ್ ಎನ್ನುವ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೀರಿಯಲ್‌ ನಟಿ ಅ*ತ್ಯಾಚಾರ ಮಾಡಿ ಬೆದರಿಸಿ ಮದುವೆ, ಈಗ ನಡುರಸ್ತೆಯಲ್ಲಿಯೇ ಅತ್ತೆ-ಮಾವನ ಮೇಲೆ ಹಲ್ಲೆ!
2 ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿಗೆ ಹೋಯ್ತು?, ವಿಪಕ್ಷಗಳ ಆಕ್ರೋಶಕ್ಕೆ ಹೆಬ್ಬಾಳ್ಕರ್ ಭಾವುಕ, ನಾನು ಮಹಿಳೆ ಎಂಬ ಕಾರಣಕ್ಕೆ ಹೀಗೆ ಮಾಡ್ತೀರಾ ಎಂದ ಸಚಿವೆ