ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಕ್ಷಣಗಣನೆ: ಮೇಯರ್ ಪರಿಶೀಲನೆ

Published : Aug 14, 2017, 01:48 PM ISTUpdated : Apr 11, 2018, 12:55 PM IST
ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಕ್ಷಣಗಣನೆ: ಮೇಯರ್ ಪರಿಶೀಲನೆ

ಸಾರಾಂಶ

ಇನ್ನು ಇದೇ 16ರಂದು ಇಂದಿರಾ ಕ್ಯಾಂಟೀನ್ ಉದ್ಘಾಟನೆ ಆಗಲಿದ್ದು, ಮೊದಲ ಹಂತದಲ್ಲಿ 101 ವಾರ್ಡ್‌'ಗಳಲ್ಲಿ ಕಾರ್ಯಾರಂಭಗೊಳ್ಳಲಿದೆ.

ಬೆಂಗಳೂರು(ಆ.14): ರಾಜ್ಯ ಸರ್ಕಾರದ ಬಹುನಿರೀಕ್ಷಿತ  ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಕೊನೆಯ ಹಂತದ  ಕಾಮಗಾರಿ ಪರಿಶೀಲನೆ ಕಾರ್ಯ ಭರದಿಂದ ನಡೆಯುತ್ತಿದೆ. 

ಕಳೆದ ಐದು ದಿನಗಳಿಂದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮತ್ತು ವಿಶೇಷ ಆಯುಕ್ತ ಮನೋಜ್ ರಾಜನ್ ನೇತೃತ್ವದಲ್ಲಿ ತಡ ರಾತ್ರಿ ಕಾಮಗಾರಿ ಪರಿಶೀಲನೆ ಕಾರ್ಯ ನಡೆಸುತ್ತಿದ್ದಾರೆ. ಇಂದು ಕೂಡ ವಿಶೇಷ ಆಯುಕ್ತ  ಮನೋಜ್  ರಾಜನ್ ಅವರು ಬೊಮ್ಮನಹಳ್ಳಿ, ಬನ್ನೇರುಘಟ್ಟ ವ್ಯಾಪ್ತಿಯ ಕೆಲ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು. ಇನ್ನೊಂದೆಡೆ ‌ಬಿಬಿಎಪಿ ಆಯುಕ್ತ ಮಂಜುನಾಥ್ ಪ್ರಸಾದ್ ಚಾಮರಾಜಪೇಟೆ, ರಾಜಾಜಿನಗರ ವಿಧಾನಸಭಾ ವ್ಯಾಪ್ತಿಯ ಕ್ಯಾಂಟೀನ್ ಕಾಮಗಾರಿ ಪರಿಶೀಲನೆ ನಡೆಸಿದರು.

ಇನ್ನು ಇದೇ 16ರಂದು ಇಂದಿರಾ ಕ್ಯಾಂಟೀನ್ ಉದ್ಘಾಟನೆ ಆಗಲಿದ್ದು, ಮೊದಲ ಹಂತದಲ್ಲಿ 101 ವಾರ್ಡ್‌'ಗಳಲ್ಲಿ ಕಾರ್ಯಾರಂಭಗೊಳ್ಳಲಿದೆ. ಇನ್ನುಳಿದ 97 ವಾರ್ಡ್ ಗಳಲ್ಲಿ ಆಕ್ಟೋಬರ್ 2 ಒಳಗೆ ಆರಂಭಗೊಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಮೊದಲ ಹಂತದಲ್ಲಿ ಉದ್ಘಾಟನೆಗೊಳ್ಳಲಿರುವ ಕ್ಯಾಂಟೀನ್ ಕಾರ್ಯ ಶೇ. 90ರಷ್ಟು ಮುಗಿದಿದ್ದು, ಇನ್ನೇನು ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಇದಲ್ಲದೆ ಕ್ಯಾಂಟೀನ್'ನಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ವಿಶೇಷ ಕೌಶ್ಯಲ್ಯ ತರಬೇತಿಯೂ ಕೂಡ ನಡೆಯುತ್ತಿದೆ.  

ಇಂದಿರಾ ಕ್ಯಾಂಟೀನ್'ನಲ್ಲಿ 5 ರೂಪಾಯಿಗೆ ಬೆಳಗ್ಗೆಯ ಉಪಹಾರ ಹಾಗೂ 10 ರೂಪಾಯಿಗೆ ಮಧ್ಯಾಹ್ನದ ಊಟ ದೊರೆಯಲಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ಲಾಡ್ಜ್‌ವೊಂದರಲ್ಲಿ ಅಪ್ರಾಪ್ತೆ ಮೇಲಿನ ಸ್ವಾಮೀಜಿ ರೇ*ಪ್‌ ಸಾಬೀತು: ಇಂದು ಶಿಕ್ಷೆ ಪ್ರಕಟ
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಕೋರ್ಟ್‌ ಆದೇಶ, ಏನಿದು ಪ್ರಕರಣ?