ಬಿಬಿಎಂಪಿ ಕ್ರಿಯಾ ಯೋಜನೆ ಪ್ರಸ್ತಾವನೆ : ಸದಸ್ಯರಿಂದಲೇ ವಿರೋಧ

Published : Dec 22, 2017, 10:23 AM ISTUpdated : Apr 11, 2018, 01:02 PM IST
ಬಿಬಿಎಂಪಿ ಕ್ರಿಯಾ ಯೋಜನೆ ಪ್ರಸ್ತಾವನೆ : ಸದಸ್ಯರಿಂದಲೇ ವಿರೋಧ

ಸಾರಾಂಶ

ಬಿಬಿಎಂಪಿ ಸದಸ್ಯರನ್ನೇ ಓವರ್​ಟೇಕ್​ ಮಾಡ್ತಿದ್ದಾರಾ ಆಯುಕ್ತರು? ವಿವಿಧ ಇಲಾಖೆಗಳಿಗೆ ನಿಯಮ ಬಾಹಿರವಾಗಿ ಕ್ರೀಯಾ ಯೋಜನೆಗೆ ಗ್ರೀನ್ ಸಿಗ್ನಲ್ ನೀಡುವಂತೆ ಸರ್ಕಾರಕ್ಕೆ ಕಮಿಷನರ್ ಸಲ್ಲಿಸಿರುವ ದಾಖಲೆಗಳು ಇಂತಹ ಪ್ರಶ್ನೆಗೆ ಕಾರಣವಾಗುತ್ತಿದೆ.

ಬೆಂಗಳೂರು(ಡಿ.22):  ಬಿಬಿಎಂಪಿ ಸದಸ್ಯರನ್ನೇ ಓವರ್​ಟೇಕ್​ ಮಾಡ್ತಿದ್ದಾರಾ ಆಯುಕ್ತರು? ವಿವಿಧ ಇಲಾಖೆಗಳಿಗೆ ನಿಯಮ ಬಾಹಿರವಾಗಿ ಕ್ರೀಯಾ ಯೋಜನೆಗೆ ಗ್ರೀನ್ ಸಿಗ್ನಲ್ ನೀಡುವಂತೆ ಸರ್ಕಾರಕ್ಕೆ ಕಮಿಷನರ್ ಸಲ್ಲಿಸಿರುವ ದಾಖಲೆಗಳು ಇಂತಹ ಪ್ರಶ್ನೆಗೆ ಕಾರಣವಾಗುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಬಿಬಿಎಂಪಿ ಪುರ ಪಿತೃಗಳು ತೀವ್ರ ಕೋಪಗೊಂಡಿದ್ದಾರೆ.

ಬಿಬಿಎಂಪಿ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ.  ಬಿಬಿಎಂಪಿ ಆಯುಕ್ತರು ತಮ್ಮ ಅಧಿಕಾರವನ್ನೇ ಕಿತ್ತುಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ, ಬಿಬಿಎಂಪಿ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಕೆಂಡ ಕಾರೋದಕ್ಕೆ ಕಾರಣ ಬಿಬಿಎಂಪಿ ಸದಸ್ಯರಿಗೇ ಗೊತ್ತಿಲ್ಲದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಕ್ರಿಯಾ ಯೋಜನೆಯಾಗಿದೆ.

ಬರೋಬ್ಬರಿ 2,191 ಕೋಟಿ ರೂಪಾಯಿಗಳ ಕ್ರಿಯಾ ಯೋಜನೆಗೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ವಿವಿಧ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಡುವಂತೆ ಸಲ್ಲಿಸಿರುವ ಕ್ರಿಯಾ ಯೋಜನೆ ತಪ್ಪು ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಎಂಸಿ ಕಾಯ್ದೆಗೆ ವಿರುದ್ಧವಾಗಿ ಆಯುಕ್ತರು ಕ್ರಿಯಾ ಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಿದ್ದು ತಮ್ಮ ಅಧಿಕಾರವನ್ನೇ ಮೊಟಕುಗೊಳಿಸಲು ಹೊರಟಿದ್ದಾರೆ  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!