ನಾಯಿ ಸಾಕಲು ಲೈಸೆನ್ಸ್ : ಆದೇಶ ರದ್ದು

Published : Jun 22, 2018, 04:09 PM IST
ನಾಯಿ ಸಾಕಲು ಲೈಸೆನ್ಸ್ : ಆದೇಶ ರದ್ದು

ಸಾರಾಂಶ

ನ್ಯಾಯಾಂಗ ಮಧ್ಯಪ್ರವೇಶ ಹಾಗೂ ಸಾರ್ವಜನಿಕರ ವಿರೋಧದಿಂದ ನಾಯಿ ಸಾಕುವ ವಿಚಾರ ಸಂಬಂಧ ವಿವಿಧ ಮಾರ್ಗ ಸೂಚಿಗಳನ್ನು ರಚನೆ ಮಾಡಿ ಬಿಬಿಎಂಪಿ ಹೊರಡಿಸಿದ್ದ ವಿವಾದಿತ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ.

ಬೆಂಗಳೂರು : ನ್ಯಾಯಾಂಗ ಮಧ್ಯಪ್ರವೇಶ ಹಾಗೂ ಸಾರ್ವಜನಿಕರ ವಿರೋಧದಿಂದ ನಾಯಿ ಸಾಕುವ ವಿಚಾರ ಸಂಬಂಧ ವಿವಿಧ ಮಾರ್ಗ ಸೂಚಿಗಳನ್ನು ರಚನೆ ಮಾಡಿ ಬಿಬಿಎಂಪಿ ಹೊರಡಿಸಿದ್ದ ವಿವಾದಿತ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ.

ನಗರದಲ್ಲಿ ನಾಯಿ ಸಾಕಲು ಬಿಬಿಎಂಪಿಯಿಂದ ಪರವಾನಗಿ ಪಡೆಯಬೇಕು. ಶುಲ್ಕ ಪಾವತಿಸಿ ಪ್ರತಿ ವರ್ಷ ಪರವಾನಗಿ ನವೀಕರಿಸಿಕೊಳ್ಳಬೇಕು. ಸಾಕು ನಾಯಿಗೆ ಪರವಾನಗಿ ನೀಡುವಾಗ ಬಿಬಿಎಂಪಿ ಪಶು ವೈದ್ಯ ವಿಭಾಗದ ವೈದ್ಯರು ನಾಯಿಯನ್ನು ಪರೀಕ್ಷೆಗೆ ಒಳಪಡಿಸಬಹುದು. ಒಂದು ಮನೆಗೆ ಒಂದೇ ನಾಯಿ ಸಾಕಬೇಕು.

ಕಿವಿಗೆ ಮುದ್ರೆಯಿಲ್ಲದ ನಾಯಿ, ಪರವಾನಗಿ ಪಡೆಯದಿರುವ ನಾಯಿಗಳನ್ನು ವಶಕ್ಕೆ ಪಡೆಯಲಾಗುತ್ತದೆ ಎಂಬುದು ಸೇರಿದಂತೆ ವಿವಿಧ ಮಾರ್ಗಸೂಚಿಗಳನ್ನು ರಚಿಸಿ ಬಿಬಿಎಂಪಿ ಅಧಿಸೂಚನೆ ಹೊರಡಿಸಿತ್ತು. ಬಿಬಿಎಂಪಿಯ ಈ ಅಧಿಸೂಚನೆ ಪ್ರಶ್ನಿಸಿ ನಗರದ ನಿವಾಸಿ ಇಂದಿರಾ ಗೋಪಾಲಕೃಷ್ಣ ಎಂಬುವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ, ಅಧಿಸೂಚನೆಯ ಕುರಿತು ಹೈಕೋರ್ಟ್ ಹಾಗೂ ಸಾರ್ವಜನಿಕರಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. 

ಇದರಿಂದ ಬಿಬಿಎಂಪಿಯು ಅಧಿಸೂಚನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಿಂಪಡೆದಿದೆ. ಗುರುವಾರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠಕ್ಕೆ, ರಾಜ್ಯ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಅವರು, ಅಧಿಸೂಚನೆ ಹಿಂಪಡೆಯುವ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಹೊರಡಿಸಿರುವ ಆದೇಶವನ್ನು ಸಲ್ಲಿಸಿದರು. 

ನಂತರ ವಾದ ಮಂಡಿಸಿದ ಪೊನ್ನಣ್ಣ, ನಗರದ ಪ್ರಾಣಿ ಪ್ರಿಯರು ಹಾಗೂ ಪ್ರಾಣಿ ಪೋಷಕರು ಸಲ್ಲಿಸಿದ್ದ ಹಲವು ಮನವಿಗಳ ಮೇರೆಗೆ ಬಿಬಿಎಂಪಿಯು ಅಧಿಸೂಚನೆಯನ್ನು ಹಿಂಪಡೆದಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಸಂಬಂಧಪಟ್ಟವರಿಂದ ಸಲಹೆಗಳನ್ನು ಸ್ವೀಕರಿಸಿ ಮರುಪರಿಶೀಲನೆ ನಡೆಸಿದ ನಂತರ ಹೊಸ ಮಾರ್ಗಸೂಚಿ ರಚಿಸಲಾಗುವುದು ಎಂದು ತಿಳಿಸಿದರು. 

ಈ ಹಿನ್ನೆಲೆಯಲ್ಲಿ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿತು. ಜತೆಗೆ, ಅಧಿಸೂಚನೆ ಹಿಂಪಡೆದ ಮಾತ್ರಕ್ಕೆ ಯಶಸ್ಸು ಸಿಕ್ಕಿದೆ ಎಂಬುದಾಗಿ ಭಾವಿಸಿ ಅರ್ಜಿದಾರರು ಸುಮ್ಮನೆ ಕೂರಬಾರದು. ಸಮಾಜದ ಬಗೆಗಿನ ಕೆಲಸಗಳು ಇನ್ನಷ್ಟು ರಚನಾತ್ಮಕವಾಗಿ ನಿರ್ವಹಿಸಬೇಕು. ನಾಯಿ ಸಾಕುವ ವಿಚಾರಕ್ಕೆ ಸಂಬಂಧಿಸಿದ ನಿಯಮಗಳಿಗೆ ಸರ್ಕಾರ ಹಾಗೂ ಬಿಬಿಎಂಪಿಗೆ ಅರ್ಜಿದಾರರು ಸಲಹೆ ನೀಡಬಹುದು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತು. ಹಾಗೆಯೇ, ಈ ವಿಚಾರದಲ್ಲಿ ಸಮಗ್ರವಾದ ಬೈಲಾ (ಉಪ ನಿಯಮಗಳು) ರಚನೆ ಮಾಡುವಂತೆ ಸರ್ಕಾರಕ್ಕೆ ಇದೇ ವೇಳೆ ಸಲಹೆ ನೀಡಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Coriander Leaves Farming: ಇಷ್ಟು ಎಲೆಗೆ ಅಷ್ಟು ಯಾಕೆ ಕೊಡ್ತೀರಿ? ಸಣ್ಣ ಪಾಟ್‌ನಲ್ಲೇ ಕೊತ್ತುಂಬರಿ ಬೆಳೆಯಲು Tips
ಬೆಂಗಳೂರಿನ 2ನೇ ಏರ್‌ಪೋರ್ಟ್‌, ಗುರುತಿಸಿರೋ ಈ 3 ಸ್ಥಳಗಳಲ್ಲಿ ಯಾವುದು ಬೆಸ್ಟ್? ಅಧ್ಯಯನಕ್ಕೆ ಟೆಂಡರ್ ಕರೆದ ಸರ್ಕಾರ!