
ನವದೆಹಲಿ (ಮೇ.07): ಮುಂದಿನ ತಿಂಗಳು ನಡೆಯಲಿರುವ ಐಸಿಸಿ ಚಾಂಪಿಯನ್ ಟ್ರೋಫಿ-2017 ನಲ್ಲಿ ಟೀಮ್ ಇಂಡಿಯಾ ಭಾಗವಹಿಸಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಹೇಳಿದೆ.
ಬಿಸಿಸಿಐ ನಡೆಸಿದ ವಿಶೇಷ ಸಭೆಯಲ್ಲಿ ಅವಿರೋಧವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾಳೆ ಆಲ್ ಇಂಡಿಯಾ ಸೀನಿಯರ್ ಸೆಲೆಕ್ಷನ್ ಸಭೆ ನಡೆಯಲಿದ್ದು, ತಂಡದ ಸದಸ್ಯರನ್ನು ಆಯ್ಕೆ ಮಾಡಲಿದ್ದಾರೆ.
ಮುಂದಿನ ತಿಂಗಳು ನಡೆಯಲಿರುವ ಐಸಿಸಿ ಚಾಂಪಿಯನ್’ಶಿಪ್’ನಲ್ಲಿ ಟೀಂ ಇಂಡಿಯಾ ಭಾಗವಹಿಸಲಿದೆ. ಐಸಿಸಿ ವಿರುದ್ಧ ಯಾವುದೇ ಕಾನೂನಿನ ನೆರವನ್ನು ಪಡೆಯಲಿಲ್ಲ. ಅಮಿತಾಬ್ ಚೌಧರಿ ಹಾಗೂ ಸಿಇಒ ರಾಹುಲ್ ಜೋಹ್ರಿ ಐಸಿಸಿ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.