ಕೂಡಲೇ ಮನೆ ಖಾಲಿ ಮಾಡಿ: ಮಾಜಿ ಡಿಸಿಎಂ ಪರಮೇಶ್ವರ್‌ಗೆ ಬಿಡಿಎ ನೋಟಿಸ್‌

Published : Sep 10, 2019, 10:01 AM IST
ಕೂಡಲೇ ಮನೆ ಖಾಲಿ ಮಾಡಿ: ಮಾಜಿ ಡಿಸಿಎಂ ಪರಮೇಶ್ವರ್‌ಗೆ ಬಿಡಿಎ ನೋಟಿಸ್‌

ಸಾರಾಂಶ

ಕೂಡಲೇ ಮನೆ ಖಾಲಿ ಮಾಡಿ: ಪರಮೇಶ್ವರ್‌ಗೆ ಬಿಡಿಎ ನೋಟಿಸ್‌| 1.5 ತಿಂಗಳಾದರೂ ಸರ್ಕಾರಿ ಮನೆ ಮರಳಿಸದ ಮಾಜಿ ಡಿಸಿಎಂ

ಬೆಂಗಳೂರು[ಸೆ.10]: ಅವಧಿ ಮುಗಿದ ನಂತರವೂ ಸರ್ಕಾರಿ ನಿವಾಸ ಖಾಲಿ ಮಾಡದ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರಿಗೆ ವಾರದೊಳಗೆ ನಿವಾಸ ಖಾಲಿ ಮಾಡುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನೋಟಿಸ್‌ ಜಾರಿಗೊಳಿಸಿದೆ.

ರಾಜ್‌ಮಹಲ್‌ ವಿಲಾಸ 2ನೇ ಹಂತದ ಸದಾಶಿವನಗರದಲ್ಲಿ ಬಿಡಿಎ ನಿರ್ಮಿಸಿರುವ ವಸತಿ ಗೃಹ (94/ಎ)ವನ್ನು ಬಾಡಿಗೆ ಆಧಾರದ ಮೇಲೆ ಸರ್ಕಾರಕ್ಕೆ ಹಂಚಿಕೆ ಮಾಡಲಾಗಿದೆ. ಸದರಿ ವಸತಿ ಗೃಹವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಕಚೇರಿ ಉಪಯೋಗಕ್ಕಾಗಿ ನೀಡಲಾಗಿದೆ. ಆದ್ದರಿಂದ ನಿವಾಸವನ್ನು ಕೂಡಲೇ ಖಾಲಿ ಮಾಡಿ ಎಂದು ಪರಮೇಶ್ವರ್‌ ಅವರಿಗೆ ಸೂಚನೆ ನೀಡಲಾಗಿದೆ.

ತಮ್ಮ ಅಧಿಕಾರಾವಧಿಯಲ್ಲಿ ಉಪಯೋಗಿಸಿದ ವಿದ್ಯುಚ್ಛಕ್ತಿ ವೆಚ್ಚ ಮತ್ತು ನೀರಿನ ವೆಚ್ಚ ಪಾವತಿಸಿರುವ ಬಿಲ್ಲುಗಳ ವಿವರಗಳೊಂದಿಗೆ ವಸತಿ ಗೃಹವನ್ನು ಒಂದು ವಾರದೊಳಗೆ ಪ್ರಾಧಿಕಾರಕ್ಕೆ ಹಿಂದಿರುಗಿಸುವಂತೆ ಬಿಡಿಎ ಆಯುಕ್ತರು ಸೂಚಿಸಿದ್ದಾರೆ.

ಮೈತ್ರಿ ಸರ್ಕಾರ ಪತನವಾಗಿ ಒಂದೂವರೆ ತಿಂಗಳು ಕಳೆದರೂ ಪರಮೇಶ್ವರ್‌ ಅವರು ಸದಾಶಿವನಗರದ ಬಿಡಿಎ ವಸತಿ ಗೃಹವನ್ನು ಖಾಲಿ ಮಾಡದ ಕಾರಣ ನೋಟಿಸ್‌ ನೀಡಲಾಗಿದೆ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪದೇಪದೆ 'ನಮ್ಮಪ್ಪನೇ ಸಿಎಂ..' ಯತೀಂದ್ರ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರ? ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಕರ್ನಾಟಕ ವಿಧಾನಸಭೆಯಲ್ಲಿ ಎರಡು ಮಹತ್ವದ ವಿಧೇಯಕ ಮಂಡನೆ, ಉದ್ದೇಶಗಳು ಮತ್ತು ಕಾರಣಗಳು ಯಾವುವು?