
ನವದೆಹಲಿ (ಮಾ.31): ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆ, ಲೋಕಸಭೆ ಚುನಾವಣೆ ಬಗ್ಗೆ ಪ್ರಧಾನಿ ಇಂದು ರಾಜ್ಯ ಸಂಸದರೊಂದಿಗೆ ಚರ್ಚೆ ನಡೆಸಿದರು.
ಕೇಂದ್ರದ ಯೋಜನೆಗಳ ಬಗ್ಗೆ ತಮ್ಮ ಕ್ಷೇತ್ರದ ಜನರಿಗೆ ಮಾಹಿತಿ ನೀಡಿ, ಬೂತ್ ಮಟ್ಟದಲ್ಲಿ ಕೆಲಸ ಆರಂಭಿಸುವಂತೆ ಸೂಚಿಸಿದ್ದಾರೆ.
ರಾಜ್ಯ ಬಿಜೆಪಿಯಲ್ಲಿರುವ ಒಳಜಗಳವನ್ನು ಕಡಿಮೆ ಮಾಡಿ ಎಂದು ಪ್ರಧಾನಿ ಪರೋಕ್ಷವಾಗಿ ಬಿಎಸ್ವೈ, ಈಶ್ವರಪ್ಪಗೆ ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿಯಲ್ಲಿ ಓರ್ವ ಸಿಎಂ ಆಗಿ ಪ್ರಮಾಣ ವಚನ ಮಾಡುವ ಮೊದಲೆ ಓರ್ವ ವಿರೋಧ ಪಕ್ಷದ ನಾಯಕ ತಯಾರಾಗಿರುತ್ತಾರೆ ಎಂದು ಪ್ರಧಾನಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. ತಮ್ಮ ಕ್ಷೇತ್ರದ ಉಸ್ತುವಾರಿಗಳ ಜೊತೆ ನೇರ ಸಂರ್ಪಕದಲ್ಲಿ ಇಟ್ಟುಕೊಂಡು 2018 ಮತ್ತು 2019ರ ಚುನಾವಣೆಗೆ ತಯಾರಿ ಮಾಡಿಕೊಳ್ಳಿ ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.