
ತುಮಕೂರು(ಎ.04): ಪದೇ ಪದೇ ಗ್ರಾಮಸ್ಥರ ಮೇಲೆ ದಾಳಿ ಮಾಡ್ತಿದ್ದ ಕರಡಿಯನ್ನು ಗ್ರಾಮಸ್ಥರೇ ಹೊಡೆದು ಕೊಂದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಮಧುಗಿರಿ - ಕೊರಟಗೆರೆ ಮಾರ್ಗ ಮಧ್ಯೆ ಬರುವ ಗ್ರಾಮದಲ್ಲಿ ಈ ಹಿಂದೆ ಮಹಿಳೆಯೊಬ್ಬರ ಮೇಲೆ ಕರಡಿ ದಾಳಿ ಮಾಡಿತ್ತು, ಅಲ್ಲದೇ ಗ್ರಾಮಸ್ಥರ ಮೇಲೆ ಮತ್ತು ಹೊಲಗಳಲ್ಲಿ ದಾಂಧಲೆ ಸೃಷ್ಠಿಸುತ್ತಿತ್ತು, ಈ ಬಗ್ಗೆ ಗ್ರಾಮಸ್ಥರು ಅನೇಕ ಬಾರಿ ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಆದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ , ಇದರಿಂದ ಆಕ್ರೋಶಗೊಂಡಿದ್ದ ಗ್ರಾಮಸ್ಥರು ಇಂದು ವ್ಯಕ್ತಿ ಮೇಲೆರಗಿದ ಕರಡಿಯನ್ನು ದೊಣ್ಣೆಗಳಿಂದ ಹೊಡೆದು ಕೊಂದಿದ್ದಾರೆ .
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.