ಬಹಿರ್ದೆಸೆಗೆ ಹೋಗಿದ್ದ ಮಹಿಳೆ ಮೇಲೆ ಕರಡಿ ದಾಳಿ; ಸಾವು

Published : Jan 18, 2018, 04:12 PM ISTUpdated : Apr 11, 2018, 12:51 PM IST
ಬಹಿರ್ದೆಸೆಗೆ ಹೋಗಿದ್ದ ಮಹಿಳೆ ಮೇಲೆ ಕರಡಿ ದಾಳಿ; ಸಾವು

ಸಾರಾಂಶ

ಬಹಿರ್ದೆಸೆಗೆ ಹೋಗಿದ್ದ ಗರ್ಭಿಣಿ ಮೇಲೆ ಕರಡಿ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಚೌಕಸಂದ್ರ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು (ಜ.18): ಬಹಿರ್ದೆಸೆಗೆ ಹೋಗಿದ್ದ ಗರ್ಭಿಣಿ ಮೇಲೆ ಕರಡಿ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಚೌಕಸಂದ್ರ ಗ್ರಾಮದಲ್ಲಿ ನಡೆದಿದೆ.

ಚೌಕಸಂದ್ರ ಗ್ರಾಮದ ನಿವಾಸಿ ಸುಮಭಾಯಿ ಮೃತ ದುರ್ದೈವಿ. ಇಂದು ಬೆಳಿಗ್ಗೆ ಸುಮಾರು 5  ಗಂಟೆಯ ವೇಳೆ ಬಹಿರ್ದೆಸೆಗೆ ಸುಮಾಭಾಯಿ ಮನೆಯ ಹಿಂಬದಿ ಹೋಗಿದ್ದರು.  ಈ ವೇಳೆ ಕರಡಿ ದಾಳಿ ನಡೆಸಿದ್ದು ಕುತ್ತಿಗೆ ಭಾಗದಲ್ಲಿ ಕಚ್ಚಿ, ಕೊರಳನ್ನು ಪರಚಿದೆ. ಪರಿಣಾಮ ತೀವ್ರ ರಕ್ತ ಸ್ರಾಮದಿಂದ ಸುಮಾಭಾಯಿ ಸಾವನ್ನಪ್ಪಿದ್ದಾರೆ. ಗ್ರಾಮಸ್ಥರು ಚಿರತೆ ದಾಳಿಯಿಂದ ಸುಮಭಾಯಿ ಸಾವನ್ನಪ್ಪಿದ್ದಾಳೆ. ಕರಡಿ ಕುತ್ತಿಗೆ ಭಾಗದಲ್ಲಿ ಕಚ್ಚಿದೆ ಎಂದು ತಿಳಿಸಿದ್ದಾರೆ. ಇನ್ನೂ ಸ್ಥಳಕ್ಕೆ ಕನಕಪುರ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕರಡಿ ದಾಳಿಯಿಂದ ಆಗಿರುವ ಸಾವು ಎಂದು ಧೃಡಪಡಿಸಿದ್ದಾರೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಧಿಕಾರ ಹಂಚಿಕೆ ವಿಷಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್ ವಿಫಲ: ಕೆ.ಎಸ್.ಈಶ್ವರಪ್ಪ ಲೇವಡಿ
ಪಾಕ್‌ ಸರ್ಕಾರಿ ವಿಮಾನ ಸಂಸ್ಥೆ ಯಾರಿಗೂ ಬೇಡ : ಬಿಡ್‌ನಿಂದ ಸೇನೆ ಔಟ್‌