
ರಾಮೇಶ್ವರಂ(ಜು.31): ತಮಿಳುನಾಡಿನ ಪುರಾಣಪ್ರಸಿದ್ಧ ಕ್ಷೇತ್ರ ರಾಮೇಶ್ವರದಲ್ಲಿ ಮೂರು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ ಮಾಜಿ ರಾಷ್ಟ್ರಪತಿ ಡಾ| ಎಪಿಜೆ ಅಬ್ದುಲ್ ಕಲಾಂ ಸ್ಮಾರಕ ಇದೀಗ ವಿವಾದಕ್ಕೆ ಕಾರಣವಾಗಿದೆ.
ರಾಮೇಶ್ವರದಲ್ಲಿರುವ ಕಲಾಂ ಅವರ ಹುಟ್ಟೂರು ಪೀಕರಂಬುವಿನಲ್ಲಿ ಲೋಕಾರ್ಪಣೆಗೊಂಡಿರುವ ಕಲಾಂ ಅವರ ಸ್ಮಾರಕದಲ್ಲಿ ಕಲಾಂ ಅವರು ವೀಣೆ ನುಡಿಸುತ್ತಿರುವ ಪ್ರತಿಮೆಯೊಂದು ಇದೆ. ಅದರ ಬಳಿ ಭಗವದ್ಗೀತೆಯ ಪ್ರತಿ ಇಟ್ಟಿರುವುದು ವಿವಾದದ ಮೂಲ.
ಕಲಾಂ ಅವರ ಪರಂಪರೆಯನ್ನು ಕೇಂದ್ರ ಕೇಸರೀಕರಣ ಮಾಡಲು ಯತ್ನಿಸುತ್ತಿದೆ ಎಂಬ ಆರೋಪಗಳು ಬಂದಿವೆ. ಇದರ ಬೆನ್ನಲ್ಲೇ ಕಲಾಂ ಪ್ರತಿಮೆಯ ಬಳಿ ಕುರಾನ್ ಹಾಗೂ ಬೈಬಲ್ ಪ್ರತಿಯನ್ನೂ ತಂದಿಟ್ಟು, ವಿವಾದಕ್ಕೆ ತೇಪೆ ಹಚ್ಚಲು ಪ್ರಯತ್ನಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.