ಬದುಕಿಗಾಗಿ ನಡೆದಿದೆ ಕಾಳಗ: ನೆರೆ ಸಂತ್ರಸ್ತರ ನೆರವಿಗೆ ಬಿಇಎಲ್ ಉ.ಕ ಬಳಗ

Published : Aug 22, 2019, 06:32 PM ISTUpdated : Aug 22, 2019, 06:49 PM IST
ಬದುಕಿಗಾಗಿ ನಡೆದಿದೆ ಕಾಳಗ: ನೆರೆ ಸಂತ್ರಸ್ತರ ನೆರವಿಗೆ ಬಿಇಎಲ್ ಉ.ಕ ಬಳಗ

ಸಾರಾಂಶ

ನೆರೆ ಸಂತ್ರಸ್ತರೆಗೆ ಬಿಇಎಲ್ ಉ.ಕ ಬಳಗದಿಂದ ವಿಭಿನ್ನ ರೀತಿಯ ನೆರವು| ಮನೆ ಕಳೆದುಕೊಂಡವರ ನೆರವಿಗೆ ಧಾವಿಸಿದ ಬಿಇಎಲ್ ಉ.ಕ ಬಳಗ|  ಸಂತ್ರಸ್ತರಿಗೆ ಹಣ, ಇಟ್ಟಿಗೆ ಸಿಮೆಂಟ್, ಕಬ್ಬಿಣ ಇತ್ಯಾದಿಗಳ ಪೂರೈಕೆ| ಸುಮಾರು 750 ಬಾಕ್ಸ್‌ಗಳಲ್ಲಿ ದಿನಬಳಕೆಯ ಪದಾರ್ಥ ರವಾನೆ|

ಬೆಂಗಳೂರು(ಆ.22): ಉತ್ತರ ಕರ್ನಾಟಕದಲ್ಲಿ ತಲೆದೂರಿರುವ ಭೀಕರ ಜಲಪ್ರಳಯ ಹಾಗೂ ನಿರಂತರ ಮಳೆಯಿಂದಾಗಿ ಮನೆ, ಆಸ್ತಿ ಕಳೆದುಕೊಂಡು ನಿರಾಶ್ರಿತರಾದ ಜನತೆಗೆ ಬಿಇಎಲ್ ಉತ್ತರ ಕರ್ನಾಟಕ ಬಳಗ ವಿಭಿನ್ನ ರೀತಿಯಲ್ಲಿ ನೆರವು ನೀಡಲು ಮುಂದಾಗಿದೆ.

ಸುಮಾರು 750 ಬಾಕ್ಸ್‌ಗಳಲ್ಲಿ ದಿನಬಳಕೆಯ ಪದಾರ್ಥ ಸೇರಿದಂತೆ ಒಟ್ಟು 20 ಬಗೆಯ ಆಹಾರ ಸಾಮಾಗ್ರಿಗಳನ್ನು ಒದಗಿಸುವುದರ ಜೊತೆಗೆ ಮನೆ ಕಳೆದು ಕೊಂಡವರಿಗೆ ಹಣ ನೀಡುವುದರ ಬದಲಾಗಿ ಮನೆ ಪುನರ್ ನಿರ್ಮಾಣಕ್ಕೆ ಅಗತ್ಯವಿರುವ ಇಟ್ಟಿಗೆ ಸಿಮೆಂಟ್, ಕಬ್ಬಿಣ ಇತ್ಯಾದಿ ವಸ್ತುಗಳನ್ನು ನೇರವಾಗಿ ಸಂತ್ರಸ್ತರಿಗೆ ಖರೀದಿಸಿ ಕೊಡುವ ಕಾರ್ಯಕ್ಕೆ ಮುಂದಾಗಿದೆ.

ನೆರೆ ಪೀಡಿತ ಪ್ರದೇಶಗಳಾದ ಬಾಗಲಕೋಟ ಜಿಲ್ಲೆಯ ಮುತ್ತೂರು, ಕಂಕಣವಾಡಿ, ಕಳಕೋಡ, ತಮದಡ್ಡಿ, ಹಿಪ್ಪರಗಿ, ಹಳಿಂಗಳಿ ಜಂಬಗಿ, ರೂಗಿ, ಒಂಟಗೋಡಿ ಹಾಗೂ ಅಥಣಿ ತಾಲೂಕಿನ ಸೇಗುಣಸಿ ಗ್ರಾಮಗಳಲ್ಲಿನ ನೆರೆ ಸಂತ್ರಸ್ತರಿಗೆ “ನೇರ ನೆರವು” ಎನ್ನುವ ಕಾರ್ಯಕ್ರಮದ ಅಡಿಯಲ್ಲಿ ಸಹಾಯ ಹಸ್ತವನ್ನು ಜಾಲಹಳ್ಳಿಯ ಬಿಇಎಲ್‌ನ ಉತ್ತರ ಕರ್ನಾಟಕ ಬಳಗ ಕೈಗೊಂಡಿದೆ.

ಸರಿಸುಮಾರು ಒಂದು ತಿಂಗಳಿಗಾಗುವಷ್ಟು ಪ್ರತಿ ಕುಟುಂಬಕ್ಕೆ 20 ಆಹಾರ ಸಾಮಗ್ರಿಗಳನ್ನು ಒದಗಿಸಲಾಗಿದೆ. ಪ್ರಮುಖವಾಗಿ ಅಕ್ಕಿ, ಗೋದಿ ಹಿಟ್ಟು, ಸಕ್ಕರೆ, ಎಣ್ಣೆ, ಬೆಳೆ, ರವೆ, ಅವಲಕ್ಕಿ, ಚಹಾಪುಡಿ, ಉಪ್ಪು, ಬಿಸ್ಕತ್, ಮೇಣದ ಬತ್ತಿ, ಬೆಂಕಿ ಕೊಟ್ಟಣ, ಟಾರ್ಚ್, ಬ್ಯಾಟರಿ, ಸ್ಯಾನಿಟರಿ ಪ್ಯಾಡ್, ತಟ್ಟೆ ಸೇರಿದಂತೆ ಹಲವು ದಿನಬಳಕೆಯ ವಸ್ತುಗಳನ್ನು ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ