ದೋಸ್ತಿಗೆ ಮರೆಯಾದ ಆನಂದ, ರಮೇಶ್ ಜಾರಕಿಹೊಳಿ ರಾಜೀನಾಮೆ

Published : Jul 01, 2019, 03:55 PM ISTUpdated : Jul 01, 2019, 04:07 PM IST
ದೋಸ್ತಿಗೆ ಮರೆಯಾದ ಆನಂದ, ರಮೇಶ್ ಜಾರಕಿಹೊಳಿ ರಾಜೀನಾಮೆ

ಸಾರಾಂಶ

ಆನಂದ್ ಸಿಂಗ್ ರಾಜೀನಾಮೆ ನಂತರ ದೋಸ್ತಿ ಸರಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ಪಕ್ಕಾ ಆಗಿದೆ.

ಬೆಂಗಳೂರು[ಜು. 01] ದೋಸ್ತಿ ಸರಕಾರದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ರಮೇಶ್ ಜಾರಕಿಹೊಳಿ ಅಂತಿಮವಾಗಿ ರಾಜೀನಾಮೆ ನೀಡುವುದು ಪಕ್ಕಾ ಆಗಿದೆ. 

ರಾಜೀನಾಮೆ ಪತ್ರವನ್ನು ರವಾನೆ ಮಾಡಿರುವ ರಮೇಶ್ ಜಾರಿಕಿಹೊಳಿ 'ನಾನು ಗೋಕಾಕ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ’ ಎಂದು ಅಧಿಕೃತವಾಗಿ ತಿಳಿಸಿದ್ದಾರೆ. ಜುಲೈ 2 ರಂದು ರಮೇಶ್ ಜಾರಕಿಹೊಳಿ ರಾಜೀನಾಮೆ ಸಲ್ಲಿಸಲಿದ್ದಾರೆ.

ಗೌಪ್ಯ ಸ್ಥಳದಲ್ಲಿದ್ದುಕೊಂಡೆ ರಮೇಶ್ ಜಾರಕಿಹೊಳಿ ಗೇಮ್ ಪ್ಲ್ಯಾನ್

ವಿಜಯನಗರ ಶಾಸಕ ಆನಂದ್ ಸಿಂಗ್ ರಾಜೀನಾಮೆ ನಂತರ ರಾಜ್ಯ ಬಿಜೆಪಿ ಮುಖಂಡರು ರಾಜೀನಾಮೆ ಪರ್ವ ಆರಂಭವಾಗಿದೆ ಎಂದಿದ್ದರು.  ಕಳೆದ 6 ತಿಂಗಳಿನಿಂದ ದೋಸ್ತಿ ಸರಕಾರದ ವಿರುದ್ಧ ಮಾತನಾಡುತ್ತಲೇ ಬಂದ ರಮೇಶ್ ಅಂತಿಮವಾಗಿ ರಾಜೀನಾಮೆ ಸಲ್ಲಿಕೆಯ ದೃಢ ನಿರ್ಧಾರ ಮಾಡಿದ್ದಾರೆ.

ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರ ಇಲ್ಲಿದೆ..

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಏಷ್ಯಾನೆಟ್ ಕನ್ನಡಪ್ರಭ ಸುವರ್ಣ ನ್ಯೂಸ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
ಉತ್ತರ ಕನ್ನಡ: ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!