
ಬೆಳಗಾವಿ (ಸೆ.25): ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕೀಹೊಳಿ ಕ್ಷೇತ್ರದ ಜನರಿಗೆ ಅವಾಚ್ಯ ಶಬ್ದದಿಂದ ಬೈದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗೋಕಾಕ ತಾಲೂಕಿನ ಮೂಡಲಗಿ ಪಟ್ಟಣವನ್ನು ತಾಲೂಕು ದರ್ಜೆಯಿಂದ ಕೈ ಬಿಟ್ಟ ಹಿನ್ನಲೆಯಲ್ಲಿ ನಮ್ಮ ಊರು ತಾಲೂಕ ಆಗಿದ್ದನ್ನು ಯಾಕೆ ಕೈ ಬಿಟ್ಟಿದ್ದಿರಿ ಎಂದು ಕೇಳಿದ ಮೂಡಲಗಿ ಗ್ರಾಮದ ಯುವಕನೊಬ್ಬ ಸಚಿವರನ್ನು ಪ್ರಶ್ನಿಸಿದ್ದಾನೆ.
ಯುವಕನ ಪ್ರಶ್ನೆಗೆ ಸಮಾಧಾನವಾಗಿ ಉತ್ತರ ಕೊಡುವ ಬದಲು ಬೈಗುಳ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೋಳಿ ಉತ್ತರ ನೀಡಿದ್ದಾರೆ. ಸಚಿವರ ಬೈದ ಆಡಿಯೋ ಸಾಮಾಜಿಕ ಜಾಲತಾನದಲ್ಲಿ ವೈರಲ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.