‘ದೇಶವಿರೋಧಿಗಳಿಗೆ ಮೊದಲು ಗುಂಡಿಕ್ಕಿ, ಆಮೇಲೆ ನೋಡೋಣ’

Published : Mar 03, 2019, 11:25 PM IST
‘ದೇಶವಿರೋಧಿಗಳಿಗೆ ಮೊದಲು ಗುಂಡಿಕ್ಕಿ, ಆಮೇಲೆ ನೋಡೋಣ’

ಸಾರಾಂಶ

ದೇಶವೇ ಒಂದಾಗಿ ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗುತ್ತಿದ್ದರೆ  ಇನ್ನೊಂದು ಕಡೆ ದೇಶ ವಿರೋಧಿ ಪೋಸ್ಟ್ ಹಾಕುವವರ ಸುದ್ದಿಯೂ ಅಲ್ಲಲ್ಲಿ ಕೇಳಿ ಬರುತ್ತಲೆ ಇದೆ. ಇಂಥವರಿಗೆ ಏನು ಮಾಡಬೇಕು ಎಂಬುದನ್ನು ಸಂಸದ ಸುರೇಶ್ ಅಂಗಡಿ ಆಕ್ರೋಶಭರಿತರಾಗಿ ಹೇಳಿದ್ದಾರೆ.

ಬೆಳಗಾವಿ[ಮಾ. 03]  ದೇಶ ವಿರೋಧಿ ಪೋಸ್ಟ್ ಮಾಡುವವರನ್ನು ಹಾಗೂ ಘೋಷಣೆ ಕೂಗುವ ದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಿ  ಎಂದು ಸಂಸದ ಸುರೇಶ ಅಂಗಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶ ವಿರೋಧಿ ಚಟುವಟಿಕೆ ಮಾಡುವವರ ಮೇಲೆ ಗುಂಡಿಕ್ಕಬೇಕು. ನಂತರ ಮುಂದೆ ಬಂದಿದ್ದನ್ನು ನೋಡೋಣ. ರಾಮದುರ್ಗದಲ್ಲಿ ಮಹಮ್ಮದಶೆಫಿ ಬೆಣ್ಣಿ ಎಂಬುವರು ಫೇಸ್ ಬುಕ್‌ನಲ್ಲಿ ದೇಶ ವಿರೋಧಿ ಪೋಸ್ಟ್ ಮಾಡಿದ್ದರೂ ಕ್ರಮಕೈಗೊಳ್ಳದ ಪೊಲೀಸರ ವಿರುದ್ಧ ಅಂಗಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಿಂತಿಲ್ಲ ಪಾಕಿಗಳ ಕೀಟಲೆ, ಪುಲ್ವಾಮಾ ಆವಂತಿಪುರ ಬಳಿ ಬಾಂಬ್ ಸ್ಫೋಟ

 ದೇಶ ದ್ರೋಹಿಗಳ ವಿರುದ್ಧ ಕ್ರಮಕೈಗೊಳ್ಳದಿದ್ದಲ್ಲಿ ವರ್ಗಾವಣೆ ಮಾಡಿಕೊಳ್ಳಿ, ಇಲ್ಲವೇ ಪಾಕಿಸ್ತಾನಕ್ಕಾದರೂ ಹೋಗಿ ಎಂದು ಪೊಲೀಸರ ಕ್ರಮ ಟೀಕಿಸಿದರು.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಎಸ್ಪಿ ಸುಧೀರಕುಮಾರ ರೆಡ್ಡಿಗೆ ವಿರುದ್ಧ ಆಕ್ರೋಶ ಹೊರಹಾಕಿದರು.

 ದೇಶದ್ರೋಹಿಗಳನ್ನು ರಕ್ಷಣೆ ಮಾಡುವುದಿಲ್ಲ. ಅಂತವರಿಗೆ ಶಿಕ್ಷೆ ಖಂಡಿತವಾಗಿ ಆಗುತ್ತದೆ.  ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಸಾಕ್ಷಿಗಳು ಕಲೆ ಹಾಕಲಾಗುತ್ತಿದ್ದು, ಎರಡು ದಿನದಲ್ಲಿ ಆರೋಪಿಯನ್ನು ಬಂಧಿಸಲಾಗುದು ಎಂದು ಎಸ್ಪಿ ತಿಳಿಸಿದ ಮೇಲೆ ಪ್ರತಿಭಟನೆ ಹಿಂಪಡೆಯಲಾಯಿತು

 ಯಾವುದೇ ವ್ಯಕ್ತಿಗಳನ್ನು ಬಂಧಿಸುವ ಸಂದರ್ಭದಲ್ಲಿ ಸಾಕ್ಷ್ಯಗಳು ಮುಖ್ಯ. ಆದ್ದರಿಂದ ಸಾಕ್ಷ್ಯಗಳ ಸಿಕ್ಕ ನಂತರವೇ ಬಂಧಿಸಲಾಗುವುದು ಎಂದು ಎಸ್ಪಿ ಹೇಳಿದಾಗ ಜವಾಬ್ದಾರಿಯುತ ಸ್ಥಾನದಲ್ಲಿರಿ, ಮೊದಲು ಆರೋಪಿಯನ್ನು ಬಂಧಿಸಿ ಎಂದು ಅಂಗಡಿ ಒತ್ತಾಯ ಮಾಡಿದರು.

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ