ಭತ್ತದ ತಳಿ ಬಗ್ಗೆ ವೈದ್ಯರ ಮಾತು, ಮೇಸ್ಟ್ರಿಂದ ಶಹಭಾಸ್ ಪಡಕೊಂಡ ಡಾಕ್ಟರ್!

Published : Dec 18, 2018, 04:39 PM IST
ಭತ್ತದ ತಳಿ ಬಗ್ಗೆ ವೈದ್ಯರ ಮಾತು, ಮೇಸ್ಟ್ರಿಂದ ಶಹಭಾಸ್ ಪಡಕೊಂಡ ಡಾಕ್ಟರ್!

ಸಾರಾಂಶ

ಕಲಾಪದಲ್ಲಿ ಡಾಕ್ಟರ್ ಭತ್ತದ ತಳಿ ಬಗ್ಗೆ ಮಾತನಾಡಿದ್ದಾರೆ. ಸದಾ ಪಾಠ ಹೇಳುತ್ತಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರಿಂದ ಶಹಭಾಸ್ ಸಹ ಪಡೆದುಕೊಂಡಿದ್ದಾರೆ.

ಬೆಳಗಾವಿ[ಡಿ.18]  ವಿಧಾನಸಭೆ ಕಲಾಪದಲ್ಲಿ ಸಿದ್ದರಾಮಯ್ಯ ಪುತ್ರ ವರುಣಾ ಕ್ಷೇತ್ರದ ಶಾಸಕ  ಡಾ. ಯತೀಂದ್ರಗೆ ಮೇಸ್ಟ್ರಿಂದ ಭೇಷ್ ಎನ್ನಿಸಿಕೊಂಡಿದ್ದಾರೆ.

ವರುಣಾ ಕ್ಷೇತ್ರದ ಜ್ಯೋತಿ ತಳಿ ಭತ್ತ ಖರೀದಿಗೆ ಅನುಮತಿ ನೀಡುವಂತೆ ಪ್ರಸ್ತಾಪ ಇಟ್ಟಿದ್ದಾರೆ. ಶೂನ್ಯವೇಳೆಯಲ್ಲಿ ಯತೀಂದ್ರ ವಿಷಯ ಪ್ರಸ್ತಾಪ ಮಾಡಿದರು.  ಆಗ ಸ್ಪೀಕರ್ ರಮೇಶ್ ಕುಮಾರ್ ‘ಏನ್ರೀ ಡಾಕ್ಟರ್, ನೀವು ಬಹಳ ಚೆನ್ನಾಗಿ ಮಾತಾಡ್ತೀರಾ..  ಗುಡ್.. ಇಷ್ಟು ದಿನ ಏಕೆ ನೀವು ಮಾತಾಡ್ತಾ ಇರಲಿಲ್ಲ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ  ಯತೀಂದ್ರ, ಸರಿಯಾದ ಅವಕಾಶ ಸಿಕ್ಕಿರಲಿಲ್ಲ ಎಂದರು. ಮುಂದುವರಿದ ರಮೇಶ್ ಕುಮಾರ್  ’ಕಾಯಂ ಸದನದಲ್ಲಿ ಕುಳಿತುಕೊಳ್ಳಿ..ಸದನದ ನಿಯಮಾವಳಿ ಪುಸ್ತಕ ಓದಿಕೊಳ್ಳಿ’ ಅಂತ ಸಲಹೆ ನೀಡಿದರು.

ಇದಕ್ಕೆ ಉತ್ತರಿಸಿದ  ಬಳಿಕ ಕೃಷಿ ಸಚಿವ ಶಿವಶಂಕರ್ ರೆಡ್ಡಿ, ಜ್ಯೋತಿ ತಳಿ ಭತ್ತ ಖರೀದಿ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ