ಮೋದಿ ಭಾಷಣದ ನೇರ ಪ್ರಸಾರಕ್ಕೆ ಬ್ರೇಕ್ ಹಾಕಿದ ದೀದಿ ಸರ್ಕಾರ

Published : Sep 08, 2017, 07:20 PM ISTUpdated : Apr 11, 2018, 12:55 PM IST
ಮೋದಿ ಭಾಷಣದ ನೇರ ಪ್ರಸಾರಕ್ಕೆ ಬ್ರೇಕ್ ಹಾಕಿದ ದೀದಿ ಸರ್ಕಾರ

ಸಾರಾಂಶ

ಪ್ರಧಾನಿ ಮೋದಿ ಭಾಷಣದ ಲೈವ್ ಟೆಲಿಕಾಸ್ಟ್ ಮಾಡುವ ಯೋಜನೆಯನ್ನು ನಿರ್ಲಕ್ಷ್ಯಿಸುವ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರಕ್ಕೆ ಸಡ್ಡುಹೊಡೆದಿದೆ.

ಕೋಲ್ಕತ್ತಾ: ಪ್ರಧಾನಿ ಮೋದಿ ಭಾಷಣದ ಲೈವ್ ಟೆಲಿಕಾಸ್ಟ್ ಮಾಡುವ ಯೋಜನೆಯನ್ನು ನಿರ್ಲಕ್ಷ್ಯಿಸುವ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರಕ್ಕೆ ಸಡ್ಡುಹೊಡೆದಿದೆ.

ಶಿಕಾಗೋದಲ್ಲಿ ನಡೆದ ಜಾಗತಿಕ ಧರ್ಮ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ್ದ ಭಾಷಣದ 125ನೇ ವಾರ್ಷಿಕಾಚರಣೆಯನ್ನು ಸೆ.11ರಂದು ಕೇಂದ್ರ ಸರ್ಕಾರವು ಅದ್ದೂರಿಯಾಗಿ ನಡೆಸಲು ಯೋಜಿಸಿದೆ. ಆ ಸಂದರ್ಭದಲ್ಲಿ ‘ನ್ಯೂ ಇಂಡಿಯಾ ಮಿಶನ್’ ಕುರಿತು ಪ್ರಧಾನಿ ಮೋದಿ ಭಾಷಣ ಮಾಡಲಿದ್ದು, ವಿದ್ಯಾರ್ಥಿಗಳಿಗೆ ‘ಸಂಕಲ್ಪ್ ಸೇ ಸಿದ್ದಿ’ ಪ್ರತಿಜ್ಞೆಯನ್ನು ಬೋಧಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಎಲ್ಲಾ ವಿವಿಗಳು/ಕಾಲೆಜುಗಳು ನೇರಪ್ರಸಾರ ಮಾಡಬೇಕು ಎಂದು ನಿರ್ದೇಶಿಸಿ ಯುಜಿಸಿ ದೇಶದ 40 ಸಾವಿರ ವಿ/ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿದೆ.

ಆದರೆ ಪಶ್ಚಿಮ ಬಂಗಾಳ ಸರ್ಕಾರವು ಯುಜಿಸಿಯ ನಿರ್ದೇಶನವನ್ನು ನಿರ್ಲಕ್ಷಿಸುವಂತೆ ರಾಜ್ಯದ ಕಾಲೇಜುಗಳಿಗೆ ಹೇಳಿದೆ.

‘ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚಿಸದೇ ಕೇಂದ್ರ ಸರ್ಕಾರವು ಈ ರೀತಿ ಮಾಡುವಂತಿಲ್ಲ. ಇದು ಶಿಕ್ಷಣವನ್ನು ಕೇಸರೀಕರಣಗೊಳಿಸುವ  ಹುನ್ನಾರ’ ಎಂದು ಹೇಳಿರುವ ಶಿಕ್ಷಣ ಸಚಿವ ಪಾರ್ಥ ಚಟರ್ಜಿ,  ಯುಜಿಸಿ ಸುತ್ತೋಲೆಯಿಂದ ಕಾಲೇಜು/ವಿವಿಗಳಿಗೆ ಆಶ್ಚರ್ಯವಾಗಿದೆ. ಅವರು ನಮ್ಮನ್ನು ಸಂಪರ್ಕಿಸುತ್ತಿದ್ದಾರೆ. ಯುಜಿಸಿ ನಿರ್ದೆಶನವನ್ನು ಪಾಲಿಸುವುದು ಕಡ್ಡಾಯವೇನಲ್ಲ ಎಂದು ಅವರಿಗೆ ತಿಳಿಸಿದ್ದೇವೆ, ಎಂದು ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ಷರ ಲೋಕದ ಅವಧಾನಿ: ಕನ್ನಡ ಅಧ್ಯಾಪಕ ಜಿ.ಬಿ.ಹರೀಶರ ಪತ್ರಿಕಾ ಪ್ರತಿಭೆ
ನಿಮ್ಮ ಆರೋಗ್ಯಕ್ಕೆ ನಿಜವಾದದ್ದೇ ಅರ್ಹತೆ: ನಕಲಿ ಉತ್ಪನ್ನಗಳ ವಿರುದ್ಧ ಹರ್ಬಾಲೈಫ್ ಇಂಡಿಯಾದ ಉಪಕ್ರಮ