
ಬೆಂಗಳೂರು : ಏರ್ ಶೋ ಪ್ರದರ್ಶನದ ಸಮೀಪ ಪಾರ್ಕಿಂಗ್ ಮಾಡುವ ಬಗ್ಗೆ ಆಯೋಜಕರು ಮಾಹಿತಿ ನೀಡಿರಲಿಲ್ಲ. ಅಷ್ಟು ಮಾತ್ರವಲ್ಲ ಪ್ರದರ್ಶನದ ಮಳಿಗೆಗಳಲ್ಲಿ ಕೆಲವೊಂದು ಮುಂಜಾಗೃತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು ಎಂಬುದು ತಿಳಿದು ಬಂದಿದೆ.
ಡಿಜಿಪಿ ಕೇಂದ್ರ ಕಚೇರಿಯಲ್ಲಿ ನಡೆದ ಪೊಲೀಸ್ ಮಹಾ ಸಮಾವೇಶದಲ್ಲಿ ಅಗ್ನಿಶಾಮಕದ ದಳ ಎಡಿಜಿಪಿ ಸುನೀಲ್ ಅಗರ್ವಾಲ್ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಅವರ ಬಳಿ ಅವಘಡದ ಬಗ್ಗೆ ಮಾಹಿತಿ ನೀಡಿದ್ದು, ಪರೋಕ್ಷವಾಗಿ ಆಯೋಜಕರ ನಿರ್ಲಕ್ಷ್ಯದ ಬಗ್ಗೆ ವಿವರಿಸಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.
ಜ.19ರಂದು ಸ್ಥಳಕ್ಕೆ ಭೇಟಿ ನೀಡಿ ಅಗ್ನಿ ಅವಘಡದ ಸುರಕ್ಷತಾ ಕ್ರಮದ ಬಗ್ಗೆ ಮುಂಜಾಗೃತೆ ವಹಿಸಿಲ್ಲ ಎಂದು ಆಯೋಜಕರಿಗೆ ನೋಟಿಸ್ ಜಾರಿ ಮಾಡಲಾಗಿತ್ತು ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು ಎಂದು ಮೂಲಗಳು ಹೇಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ