ಪ್ಲಾಸ್ಟಿಕ್‌ ಬಳಸಿದರೆ ಆ.1ರಿಂದ ದುಪ್ಪಟ್ಟು ದಂಡ

Published : Jul 21, 2019, 08:48 AM IST
ಪ್ಲಾಸ್ಟಿಕ್‌ ಬಳಸಿದರೆ ಆ.1ರಿಂದ  ದುಪ್ಪಟ್ಟು ದಂಡ

ಸಾರಾಂಶ

ಪ್ಲಾಸ್ಟಿಕ್‌ ಬಳಸಿದರೆ ಆ.1ರಿಂದ ದುಪ್ಪಟ್ಟು ದಂಡ: ಮೇಯರ್‌ |  ಪ್ಲಾಸ್ಟಿಕ್‌ ಚೀಲ ಬಳಸುವ ಅಂಗಡಿಗಳ ಮೇಲೆ ಐದು ಪಟ್ಟು ದಂಡ ಮತ್ತು ಅಂಗಡಿ ಪರವಾನಗಿ ರದ್ದು | 

ಬೆಂಗಳೂರು (ಜು. 21):  ನಗರದಲ್ಲಿ ಆ.1ರಿಂದ ಪ್ಲಾಸ್ಟಿಕ್‌ ಚೀಲ ಬಳಸುವ ಅಂಗಡಿಗಳ ಮೇಲೆ ಐದು ಪಟ್ಟು ದಂಡ ಮತ್ತು ಅಂಗಡಿ ಪರವಾನಗಿ ರದ್ದುಪಡಿಸುವುದಾಗಿ ಮೇಯರ್‌ ಗಂಗಾಬಿಕೆ ಮಲ್ಲಿಕಾರ್ಜುನ್‌ ಎಚ್ಚರಿಸಿದ್ದಾರೆ.

ಜಯನಗರದ ಭೈರಸಂದ್ರ ವಾರ್ಡ್‌ನಲ್ಲಿ ಶಾಲಾ ಮಕ್ಕಳೊಂದಿಗೆ ‘ನಮ್ಮ ಕಸ ನಮ್ಮ ಜವಾಬ್ದಾರಿ’ ಹಾಗೂ ‘ಬೇಡ ಬೇಡ ಪ್ಲಾಸ್ಟಿಕ್‌ ಬೇಡ’ ಘೋಷಣೆಯೊಂದಿಗೆ ಆಯೋಜಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸೆಪ್ಟೆಂಬರ್‌ 1ರಿಂದ ಪ್ರತಿಯೊಂದು ಮನೆಗಳಲ್ಲೂ ಕಸ ವಿಂಗಡಿಸಿ ನೀಡಬೇಕು. ಇಲ್ಲದಿದ್ದರೆ ದಂಡ ವಿಧಿಸುವ ಪದ್ಧತಿ ಜಾರಿಗೆ ಬರಲಿದೆ. ಎಲ್ಲೆಂದರಲ್ಲಿ ಮನಸೋ ಇಚ್ಛೆ ಕಸ ಎಸೆಯುವವರನ್ನು ಪತ್ತೆ ಮಾಡಿ ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ. ಬಿಬಿಎಂಪಿ ಸದಸ್ಯ ಎನ್‌.ನಾಗರಾಜು ಮಾತನಾಡಿ, ಜಯನಗರ ಪ್ರದೇಶವನ್ನು ಪ್ಲಾಸ್ಟಿಕ್‌ ಮುಕ್ತಮಾಡಲು ಜಾಗೃತಿ ಅಭಿಯಾನ ಆರಂಭಿಸಿದ್ದೇವೆ. ಪ್ರತಿಯೊಂದು ಅಂಗಡಿಗಳಿಗೆ ತೆರಳಿ ಪರಿಶೀಲಿಸಿ ಪ್ಲಾಸ್ಟಿಕ್‌ ಬಳಕೆ ಮಾಡಿದರೆ ದಂಡ ವಿಧಿಸುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

5 States Assembly Election Results 2026: 'ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಲ ಬಿಚ್ಚಲು ಸಾಧ್ಯವಿಲ್ಲ' ತಮಿಳುನಾಡು, ಬಂಗಾಳ ಫಲಿತಾಂಶದ ಬಗ್ಗೆ ಬಿಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ!
ಟ್ರೆಂಡಿಂಗ್ ನೋಡುತ್ತಲೇ ತಮ್ಮ ಕಾರ್ಯಕರ್ತರಿಗೆ ಮಹತ್ವದ ಸಂದೇಶ ನೀಡಿದ ಮಮತಾ ಬ್ಯಾನರ್ಜಿ