
ಬೆಂಗಳೂರು[ಜೂನ್ 18] ಕಳ್ಳರು ಇದೀಗ ಹಿರಿಯ ಅಧಿಕಾರಿಗಳ ಮನೆಯನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಎರಡು ದಿನಗಳ ಹಿಂದೆ ನಿವೃತ್ತ ಐಜಿಪಿ ಎಂ.ವಿ.ಮೂರ್ತಿ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಇದೀಗ ನಿವೃತ್ತ ಐಎಎಸ್ ಅಧಿಕಾರಿ ಕೌಶಿಕ್ ಮುಖರ್ಜಿ ಮನೆಯಲ್ಲಿ ಕಳ್ಳತನವಾಗಿದೆ.
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿರುವ ಮುಖರ್ಜಿ ಮನೆಗೆ ನುಗ್ಗಿದ ಕಳ್ಳರು 6 ದುಬಾರಿ ವಾಚ್ಗಳು, 100 ಗ್ರಾಂ ಚಿನ್ನದ ಕಿವಿ ಓಲೆ, 100 ಗ್ರಾಂ ಚಿನ್ನದ ಬಳೆಗಳು, 2 ವಜ್ರದ ಉಂಗುರ, 3 ವಜ್ರದ ಕಿವಿ ಓಲೆ, 2 ದುಬಾರಿ ಪೆನ್ಗಳು, ಸೇರಿ 25 ಲಕ್ಷ ಮೌಲ್ಯದ ವಸ್ತುಗಳ ಕದ್ದು ಪರಾರಿಯಾಗಿದ್ದಾರೆ.
ಜೂನ್ 16ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ಐಜಿಪಿ ಎಂ.ವಿ.ಮೂರ್ತಿ ಅವರ ಮನೆಯೂ ಎಚ್ಎಸ್ಆರ್ ಲೇಔಟ್ನಲ್ಲಿಯೇ ಇತ್ತು. ನಿವೃತ್ತ ಅಧಿಕಾರಿಗಳ ಮನೆಯಲ್ಲಿನ ಕಳ್ಳತನ ಪೊಲೀಸರಿಗೆ ಹೊಸ ತಲೆನೋವು ತಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.