
ನವದೆಹಲಿ (ಡಿ.17): ಐಎಸ್ಐಎಸ್ ನೊಂದಿಗೆ ನಂಟು ಹೊಂದಿದ ಆರೋಪದಡಿಯಲ್ಲಿ ಬೆಂಗಳೂರು ಮೂಲದ ವ್ಯಕ್ತಿಯನ್ನು ರಾಷ್ಟ್ರೀಯ ತನಿಖಾ ದಳ ಹಾಗೂ ಇಲ್ಲಿನ ಸ್ಥಳೀಯ ಪೋಲಿಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಅಬೀದ್ ಖಾನ್ ಎನ್ನುವವರನ್ನು ಬಂಧಿಸಲಾಗಿದೆ. ಇವನು ಕಳೆದ ನಾಲ್ಕೈದು ತಿಂಗಳಿಂದ ನಕಲಿ ಗುರುತು ಹೇಳಿಕೊಂಡು ಚರ್ಚ್ ನಲ್ಲಿ ತಂಗಿದ್ದ ಎನ್ನಲಾಗಿದೆ.
ಅಬೀದ್ ಖಾನ್ ರನ್ನು ಗುಪ್ತಚರ ದಳ ತನಿಖೆ ನಡೆಸುತ್ತಿದೆ. ವಿಚಾರಣೆ ವೇಳೆ ಕೆಲವು ತನ್ನ ಸಹಚರರ ಹೆಸರನ್ನು ಹೇಳಿದ್ದು ಅವರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪೋಲಿಸ್ ಮಹಾ ನಿರ್ದೇಶಕ ಸಂಜಯ್ ಕುಮಾರ್ ಹೇಳಿದ್ದಾರೆ.
ಐಎಸ್ ಐಎಸ್ ಸಿದ್ಧಾಂತದಿಂದ ಪ್ರಭಾವಿತರಾಗಿರುವುದಾಗಿ ಖಾನ್ ಒಪ್ಪಿಕೊಂಡಿದ್ದಾನೆ. ಹೆಚ್ಚಿನ ಮಾಹಿತಿ ನೀಡಲು ರಾಷ್ಟ್ರೀಯ ತನಿಖಾ ದಳ ನಿರಾಕರಿಸಿದ್ದು ವಿಚಾರಣೆ ನಡೆಯುತ್ತಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.