ಮಹಾಮಳೆಗೆ ಭೂಕುಸಿತ.. ಪ್ರಯಾಣಿಕರೆ ದಯವಿಟ್ಟು ಗಮನಿಸಿ..

Published : Jun 14, 2018, 06:39 PM ISTUpdated : Jun 14, 2018, 06:41 PM IST
ಮಹಾಮಳೆಗೆ ಭೂಕುಸಿತ.. ಪ್ರಯಾಣಿಕರೆ ದಯವಿಟ್ಟು ಗಮನಿಸಿ..

ಸಾರಾಂಶ

ಬೆಂಗಳೂರು ಮತ್ತು ಮಂಗಳೂರು ಪ್ರಯಾಣಿಕರು ಈ ಸುದ್ದಿಯನ್ನು ಗಮನಿಸಲೇಬೇಕು. ಮಹಾಮಳೆಗೆ ಜಿಲ್ಲೆಯ ಸುಬ್ರಹ್ಮಣ್ಯ-ಸಿರಿಬಾಗಿಲು ಮಧ್ಯೆ ರೈಲ್ವೆ ಹಳಿ ಮೇಲೆ ಭೂಮಿ ಕುಸಿದಿದ್ದು ಭೂಕುಸಿತ ಉಂಟಾದ ಪರಿಣಾಮ ಬೆಂಗಳೂರು-ಮಂಗಳೂರು ಮಧ್ಯೆ ರೈಲು ಸಂಚಾರ ರದ್ದು ಮಾಡಲಾಗಿದೆ.  

ಮಂಗಳೂರು ಜೂನ್ 14: ಮಹಾಮಳೆಗೆ ಜಿಲ್ಲೆಯ ಸುಬ್ರಹ್ಮಣ್ಯ-ಸಿರಿಬಾಗಿಲು ಮಧ್ಯೆ ರೈಲ್ವೆ ಹಳಿ ಮೇಲೆ ಭೂಮಿ ಕುಸಿದಿದ್ದು ಬೆಂಗಳೂರು-ಮಂಗಳೂರು ಮಧ್ಯೆ ರೈಲು ಸಂಚಾರ ರದ್ದು ಮಾಡಲಾಗಿದೆ.

ಸುಬ್ರಹ್ಮಣ್ಯ-ಸಿರಿಬಾಗಿಲು ಮಧ್ಯಭಾಗದಲ್ಲಿ ಹಠಾತ್ ಭೂಕುಸಿತ ಉಂಟಾಗಿ ರೈಲ್ವೆ ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದ ಬೆಳಿಗ್ಗೆ 10.50ಕ್ಕೆ ಮಂಗಳೂರಿನಿಂದ ಹೊರಟಿದ್ದ ಕಾರವಾರ-ಬೆಂಗಳೂರು ರೈಲ್ವೆ ಸುಬ್ರಹ್ಮಣ್ಯವರೆಗೆ ಸಂಚರಿಸಿದ ನಂತರ ಮುಂದಿನ ಪ್ರಯಾಣ ರದ್ದುಗೊಳಿಸಿತು. ಅದೇ ರೀತಿ ಬೆಳಗ್ಗೆ ಬೆಂಗಳೂರಿನಿಂದ ಮಂಗಳೂರಿನತ್ತ ಹೊರಟಿದ್ದ ರೈಲು ಸಕಲೇಶಪುರದನಕ ಬಂದು ಪ್ರಯಾಣ ಮೊಟಕುಗೊಳಿಸಿತು.

ಭೂಕುಸಿತದಿಂದ ರೈಲ್ವೆ ಹಳಿಯ ಮೇಲೆ ಮಣ್ಣು ಬಿದ್ದಿದ್ದು ಜೆಸಿಬಿ ಮುಖೇನ ತೆರವು ಕಾರ್ಯಾಚರಣೆ ನಡೆಯುತ್ತಿದೆ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ. ಈ ಮಾರ್ಗದಲ್ಲಿ ಪ್ರಯಾಣ ಮಾಡುವವರಿದ್ದರೆ ಕೊಂಚ ಎಚ್ಚರಿಕೆ ವಹಿಸುವುದು ಒಳಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?
India News Live: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ