ನಗರದ ಶತಕವೀರ ಸರಗಳ್ಳನಿಗೆ ಪತ್ನಿಯೇ ಪ್ರೇರೇಪಣೆ

Published : Sep 19, 2018, 04:08 PM IST
ನಗರದ ಶತಕವೀರ ಸರಗಳ್ಳನಿಗೆ ಪತ್ನಿಯೇ ಪ್ರೇರೇಪಣೆ

ಸಾರಾಂಶ

ಸರಗಳ್ಳತನ ಬಗ್ಗೆ ಗೊತ್ತಿದ್ದರೂ ಸಹ ಪತಿಗೆ ಅಪರಾಧ ಕೃತ್ಯಕ್ಕೆ ಪ್ರಚೋದನೆ ನೀಡಿದ ಹಾಗೂ ಕಳವು ವಸ್ತುಗಳ ವಿಲೇವಾರಿಗೆ ಅಚ್ಯುತ್‌ಗೆ ಸಹಕರಿಸಿದ ಆರೋಪದ ಮೇರೆಗೆ ಮಹಾದೇವಿಯನ್ನು ಬಂಧಿಸಲಾಗಿದೆ.

ಬೆಂಗಳೂರು[ಸೆ.19]: ನಾಲ್ಕು ತಿಂಗಳ ಹಿಂದೆ ಗುಂಡಿನ ದಾಳಿ ನಡೆಸಿ ಪೊಲೀಸರು ಸೆರೆಹಿಡಿದಿದ್ದ ‘ಶತಕ ವೀರ’ ಕುಖ್ಯಾತ ಸರಗಳ್ಳ ಅಚ್ಯುತ್ ಕುಮಾರ್‌ನ ಪತ್ನಿ ಸಹ ಈಗ ಪತಿಗೆ ಆಶ್ರಯ ನೀಡಿದ ತಪ್ಪಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವಂತಾಗಿದೆ.

ಅಪರಾಧ ಮಾಡುವುದು ಮಾತ್ರವಲ್ಲ ಅದಕ್ಕೆ ಕುಮ್ಮಕ್ಕು ಕೊಡುವುದು ಸಹ ಅಪರಾಧವಾಗುತ್ತದೆ. ಇತ್ತೀಚಿಗೆ ಸರಗಳ್ಳತನ ಪ್ರಕರಣದಲ್ಲಿ ಬಂಧಿಸಲಾಗಿದ್ದ ಅಚ್ಯುತ್ ವಿರುದ್ಧ ತನಿಖೆ ವೇಳೆ ಆತನ ಪತ್ನಿ ಮಹಾದೇವಿ ಪಾತ್ರ ಸಹ ಕಂಡು ಬಂದಿತು. ಸರಗಳ್ಳತನ ಬಗ್ಗೆ ಗೊತ್ತಿದ್ದರೂ ಸಹ ಪತಿಗೆ ಅಪರಾಧ ಕೃತ್ಯಕ್ಕೆ ಪ್ರಚೋದನೆ ನೀಡಿದ ಹಾಗೂ ಕಳವು ವಸ್ತುಗಳ ವಿಲೇವಾರಿಗೆ ಅಚ್ಯುತ್‌ಗೆ ಸಹಕರಿಸಿದ ಆರೋಪದ ಮೇರೆಗೆ ಮಹಾದೇವಿಯನ್ನು ಬಂಧಿಸಲಾಗಿದೆ. ಈ ಬಗ್ಗೆ ತನಿಖೆ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿ ಲಭ್ಯವಾಗಬಹುದು ಎಂದು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ.ಚನ್ನಣ್ಣನವರ್  ತಿಳಿಸಿದ್ದಾರೆ.

ಜೂ.19ರಂದು ಜ್ಞಾನಭಾರತಿ ಬಳಿ ಸರಗಳ್ಳತನ ಯತ್ನಿಸಿ ಪರಾರಿಯಾಗುವಾಗ ಅಚ್ಯುತ್ ಮೇಲೆ ಗುಂಡಿನ ದಾಳಿ ನಡೆಸಿ ಪಶ್ಚಿಮ ವಿಭಾಗದ ಪೊಲೀಸರು ಸೆರೆ ಹಿಡಿದಿದ್ದರು. ಈತನ ವಿರುದ್ಧ ಬೆಂಗಳೂರು ಮಾತ್ರವಲ್ಲದೆ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ 100ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣಗಳು ದಾಖಲಾಗಿದ್ದ ಸಂಗತಿ ಬೆಳಕಿಗೆ ಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಸರಗಳ್ಳತನ ಕೃತ್ಯದಲ್ಲಿ ಪತಿಗೆ ಸಾಥ್ ನೀಡಿದ ಆತನ ಪತ್ನಿಯನ್ನು ಬಂಧಿಸಿದ್ದಾರೆ ಎಂದು ಗೊತ್ತಾಗಿದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಾಸನ: ಸ್ನೇಹಿತರಿಂದಲೇ ರೌಡಿ ಶೀಟರ್‌ ಜೆಸಿಬಿ ಮಂಜು ಹತ್ಯೆಗೆ ಯತ್ನ, ರಕ್ತದ ಮಡುವಲ್ಲಿ ನರಳಾಡಿದ ಮಂಜ
ಪ್ರತಿ ಟ್ವೀಟ್‌ಗೆ ಗರಿಷ್ಠ ಲೈಕ್ಸ್ , ಭಾರತದಲ್ಲಿ ನಂ.1 ಪ್ರಧಾನಿ ಮೋದಿ, ನಂತರದ ಸ್ಥಾನ ಯಾರಿಗೆ?