6 ತಿಂಗಳ ಹಿಂದೆಯೇ ಫೋನ್ ಟ್ಯಾಪಿಂಗ್ : ದಾಖಲೆ ಬೇಕಾ ಎಂದ ಅಶೋಕ್ ?

Published : Aug 15, 2019, 11:52 AM ISTUpdated : Aug 15, 2019, 12:09 PM IST
6 ತಿಂಗಳ ಹಿಂದೆಯೇ ಫೋನ್ ಟ್ಯಾಪಿಂಗ್ : ದಾಖಲೆ ಬೇಕಾ ಎಂದ ಅಶೋಕ್ ?

ಸಾರಾಂಶ

ಕರ್ನಾಟಕ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಆಗಿರುವುದು ನಿಜ. 6 ತಿಂಗಳ ಹಿಂದೆಯೇ ನಾನು ಈ ಬಗ್ಗೆ ಭವಿಷ್ಯ ನುಡಿದಿದ್ದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಹೇಳಿದ್ದಾರೆ. 

ಬೆಂಗಳೂರು [ಆ.15] :  ಆರು ತಿಂಗಳ ಹಿಂದೆಯೇ ಸರ್ಕಾರದಲ್ಲಿ ಫೋನ್ ಟ್ಯಾಪಿಂಗ್ ಆಗಿದೆ ಎಂದ ಆರೋಪ ಮಾಡಿದ್ದೆ.  ಫೋನ್ ಟ್ಯಾಪಿಂಗ್ ಆಗಿರುವುದು ನಿಜ. ಇದಕ್ಕೆ ನಿಮಗೆ ದಾಖಲೆ ಬೇಕಾ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ. 

ನಾನು ಗೃಹ ಮಂತ್ರಿಯಾಗಿದ್ದಾಗ ಇಲಾಖೆಯನ್ನು ಚೆನ್ನಾಗಿ ನೋಡಿದ್ದೇನೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿರುವ ಭಾಸ್ಕರ್ ರಾವ್ ಅವರು ಆರೋಪ ಮಾಡಿರುವುದು ನಿಜ. ಅವರ ಫೋನ್ ಟ್ಯಾಪ್ ಆಗಿದೆ ಎಂದರು. 

ಫೋನ್ ಕದ್ದಾಲಿಕೆ : ಸ್ವತಂತ್ರ ತನಿಖೆಗೆ ಕಮಿಷನರ್‌ ಶಿಫಾರಸು

ಸಮಾಜವನ್ನು ಕಾಯುವ ಪೋಲಿಸರದೇ ಪೋನ್ ಟ್ಯಾಪ್ ಮಾಡಿದ್ದಾರೆ ಎಂದರೆ ಅವರು ಬೇರೆಯವರನ್ನು ಬಿಡುತ್ತಾರಾ?  ಈಗಾಗಲೇ ಫೋನ್ ಟ್ಯಾಪ್ ಆಗಿರುವುದು ಸಾಬೀತಾಗಿದ್ದು ಈ ಬಗ್ಗೆ ತನಿಖೆಗೂ ಒತ್ತಾಯಿಸಿದ್ದಾರೆ ಎಂದರು. 

ಆರು ತಿಂಗಳ ಹಿಂದೆ ನಾನು ಈ ವಿಚಾರ ಪ್ರಸ್ತಾಪಿಸಿದ್ದೆ.  ಆದರೆ ಅಶೋಕ್ ಜೋಕ್ ಮಾಡಿದ್ದಾರೆ ಅಂದುಕೊಂಡಿದ್ದರು.  ಆದರೆ ಇದೀಗ ಈ ವಿಚಾರ ದೊಡ್ಡದಾಗಿದೆ ಎಂದು ಪದ್ಮನಾಭನಗರ ಶಾಸಕ ಅಶೋಕ್ ಹೇಳಿದರು. 

ರಾಜ್ಯದಲ್ಲಿ ಇದೀಗ ಫೋನ್ ಕದ್ದಾಲಿಕೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿದ್ದು, ಹಿಂದೆ ಮೈತ್ರಿ ಸರ್ಕಾರದ ಮೇಲೆ ಈ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?
ಸೇವೆಯಲ್ಲಿಯೇ ಸಾರ್ಥಕತೆ ಪಡೆಯುವ ಗೃಹ ರಕ್ಷಕರು