Jul 10, 2018, 1:23 PM IST
ಸಂಬಳ ಕೊಡದೇ ಇದ್ದುದರಿಂದ ಬಿಬಿಎಂಪಿ ಪೌರ ಕಾರ್ಮಿಕರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೌರ ಕಾರ್ಮಿಕರಿಗೆ ಸಂಬಳ ಕೊಡದೆ ಬಿಬಿಎಂಪಿ ಸತಾಯಿಸುತ್ತಿದೆ. ಕಾರ್ಮಿಕರು ಜೀವನ ಸಾಗಿಸಲು ಹೆಣಗಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಇದನ್ನು ಖಂಡಿಸಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸುವುದಾಗಿ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಭರವಸೆ ನೀಡಿದ್ದಾರೆ.