ಬೆಂಗಳೂರಿಗರೇ ಎಚ್ಚರ : ಇನ್ನೂ ಕೆಲ ದಿನ ನಗರದಲ್ಲಿ ಧಾರಾಕಾರ ಮಳೆ

Published : May 03, 2018, 08:39 AM IST
ಬೆಂಗಳೂರಿಗರೇ ಎಚ್ಚರ : ಇನ್ನೂ ಕೆಲ ದಿನ ನಗರದಲ್ಲಿ ಧಾರಾಕಾರ ಮಳೆ

ಸಾರಾಂಶ

ಬೆಂಗಳೂರಿನಲ್ಲಿ ಈಗಾಗಲೇ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು  ಇನ್ನೂ ಕೆಲ ದಿನಗಳ ಕಾಲ ನಗರದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರು : ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನಗರದ ತಾಪಮಾನ ಇಳಿಕೆ ಯಾಗಿದೆ. ಮಂಗಳವಾರ 36 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗಿದ್ದ ಗರಿಷ್ಠ ತಾಪಮಾನ ಬುಧವಾರ 33 ರಿಂದ 34 ಡಿ.ಸೆ.ವರೆಗೆ ಇಳಿಕೆ ಯಾಗಿದೆ. ಇನ್ನೂ ಕೆಲ ದಿನಗಳ ಕಾಲ ನಗರದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಗರದ ಬಹುಭಾಗಗಳಲ್ಲಿ ಬುಧವಾರ ಸುರಿದ ಧಾರಾಕಾರ ಗಾಳಿ ಮಳೆಗೆ 90 ವಿದ್ಯುತ್ ಕಂಬ ಹಾಗೂ 8 ಮರಗಳೂ ಸೇರಿದಂತೆ 45ಕ್ಕೂ ಹೆಚ್ಚು ಮರದ ಕೊಂಬೆಗಳು ನೆಲಕಚ್ಚಿವೆ. ವಿದ್ಯಾರಣ್ಯಪುರದಲ್ಲಿ ಬೃಹತ್ ಗಾತ್ರದ ಮರ ಮನೆಯೊಂದರ ಮೇಲೆ ಬಿದ್ದು ಚಾವಣಿ ಮತ್ತು ಕಾಂಪೌಂಡ್ ಹಾನಿಗೀಡಾಗಿದೆ. ಇದೇ ರೀತಿ ಬೆಂಗಳೂರಿನಲ್ಲಿ ಬುಧವಾರ ಸುರಿದ ಮಳೆಯು ಭಾರೀ ಅನಾಹುತವನ್ನು ಸೃಷ್ಟಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?