
ಬೆಂಗಳೂರು (ಮಾ. 12): ಬೆಂಗಳೂರು ರಕ್ಷಿಸಿ ಪಾದಯಾತ್ರೆ 10 ನೇ ದಿನಕ್ಕೆ ಕಾಲಿಟ್ಟಿದ್ದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ನಡೆಯಲಿದೆ.
ಮಾಜಿ ಮುಖ್ಯಮಂತ್ರಿ ಆರ್ ಅಶೋಕ್ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದೆ. ಪ್ರಮುಖ ಬಿಜೆಪಿ ನಾಯಕರು ಇವರಿಗೆ ಸಾಥ್ ನೀಡಿದ್ದಾರೆ. ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಗೂಂಡಾ ಸರ್ಕಾರವನ್ನು ಕೆಳಗಿಳಿಸಿ ಎಂದು ಘೋಷಣೆ ಕೂಗುವ ಮೂಲಕ ಪಾದಯಾತ್ರೆ ಆರಂಭಿಸಿದ್ದಾರೆ. ಸಿದ್ದರಾಮಯ್ಯನವರ ಡೋಂಗಿತನ ಇನ್ನು ಬೆಂಗಳೂರಲ್ಲಿ ನಡೆಯಲ್ಲ. ಲೂಟಿಕೋರ ಸಿದ್ದರಾಮಯ್ಯ, ದರೋಡೆಕೋರ ಸಿದ್ದರಾಮಯ್ಯ ಬೆಂಗಳೂರನ್ನು ಲೂಟಿ ಮಾಡಲು ಬಂದಿದ್ದಾರೆ. ಸಿಎಂ ಹುದ್ದೆಗೆ ಅವರು ನಾಲಾಯಕ್. ನಾವು ಕಾಂಗ್ರೆಸ್ಸನ್ನು ಬೇರು ಸಮೇತ ಕಿತ್ತು ಹಾಕುತ್ತೇವೆ ಎಂದು ಆರ್ ಅಶೋಕ್ ಸುವರ್ಣ ಜೊತೆ ಹೇಳಿದ್ದಾರೆ.
ಬೆಂಗಳೂರಿನ ಜನತೆಯಲ್ಲಿ ಜನ ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ಈ ಬಿಜೆಪಿ ಈ ಪಾದಯಾತ್ರೆಯನ್ನು ನಡೆಸುತ್ತಿದ್ದು, ಜನ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸದಲ್ಲಿದ್ದಾರೆ ಬಿಜೆಪಿ ನಾಯಕರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.