
ಬೆಂಗಳೂರು(ಮಾ.02): ಚುನಾವಣೆ ಹತ್ತಿರವಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಪ್ರಭುತ್ವ ಸಾಧಿಸಲು ಬಿಜೆಪಿ ಹೊಸ ತಂತ್ರದೊಂದಿಗೆ ಬೀದಿಗಿಳಿದು ಬೆಂಗಳೂರು ರಕ್ಷಿಸಿ ಯಾತ್ರೆ ಮೂಲಕ ಪ್ರತಿಭಟನೆ ನಡೆಸುತ್ತಿದೆ.
ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಿಜೆಪಿ ನಾಯಕರು ಪ್ರತಿಭಟನೆ ಆರಭಿಸಿದರು. ನಲಪಾಡ್ ಗೂಂಡಾಗಿರಿ ಸೇರಿದಂತೆ ಕಾಂಗ್ರೆಸ್ ಮುಖಂಡರ ದಬ್ಬಾಳಿಕೆಯನ್ನು ಖಂಡಿಸಿ ಪ್ರತಿಭಟನೆ ಆರಂಭಿಸಿದ್ದಾರೆ. ಇಂದಿನಿಂದ 14 ದಿನಗಳ ಕಾಲ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕ ತಮ್ಮ ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸಲಿದ್ದಾರೆ. ಪ್ರತಿದಿನ ಸುಮಾರು ಮೂರು ಕಿಲೋ ಮೀಟರ್ ಪಾದಯಾತ್ರೆ ನಡೆಸಲಿರುವ ಕಾರ್ಯಕರ್ತರೊಂದಿಗೆ ಪ್ರತಿದಿನ ಒಬ್ಬೊಬ್ಬ ಕೇಂದ್ರದ ನಾಯಕರು ಭಾಗವಹಿಸಲಿದ್ದಾರೆ. ಮಾರ್ಚ್ 16ರಂದು ಬೆಂಗಳೂರು ರಕ್ಷಿಸಿ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.
ಬೆಂಗಳೂರು ರಕ್ಷಿಸಿ ಯಾತ್ರೆಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್, ಪ್ರಕಾಶ್ ಜಾವೇಡ್ಕರ್, ಸದಾನಂದ ಗೌಡ ಸೇರಿದಂತೆ ಪ್ರಮುಖ ಮುಖಂಡರು ಪಾಲ್ಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.