
ಬೆಂಗಳೂರು(ಸೆ. 14): ಕಳೆದ ಎರಡು ದಿನಗಳಿಂದ ಕಾವೇರಿ ಕಿಚ್ಚಿಗೆ ಸಿಕ್ಕು ‘ಬೆಂದ’ಕಾಳೂರಾಗಿದ್ದ ನಗರ ಬುಧವಾರ ಶಾಂತಗೊಂಡಿದೆ. ಇಲ್ಲಿಯ ಜನಜೀವನ ಬಹುತೇಕ ಸಹಜಸ್ಥಿತಿಗೆ ಬಂದಿದೆ. ಬಹುತೇಕ ಅಂಗಡಿ-ಮುಂಗಟ್ಟುಗಳು, ಮಾರುಕಟ್ಟೆ ಬಾಗಿಲು ತೆರೆದಿವೆ. ಅನೇಕ ಕಡೆ ಶಾಲಾ ಕಾಲೇಜುಗಳು ಎಂದಿನಂತೆ ನಡೆಯುತ್ತಿವೆ. ಸಾರ್ವಜನಿಕ ಸಾರಿಗೆ ಚಾಲನೆಯಲ್ಲಿದೆ.
ಇಂದು ಎಲ್ಲಿಯೂ ಅಹಿತಕರ ಘಟನೆ ನಡೆದ ವರದಿಯಾಗಿಲ್ಲ. 16 ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶಗಳಲ್ಲಿ ವಿಧಿಸಲಾಗಿದ್ದ ಕರ್ಫ್ಯೂವನ್ನು ಹಿಂಪಡೆಯಲು ಗೃಹ ಸಚಿವರು ಸೂಚಿಸಿದ್ದಾರೆ. ಆದರೆ, ಈ ಸ್ಥಳಗಳಲ್ಲಿ ಮುನ್ನೆಚ್ಚರಿಕೆಯಾಗಿ ಶಾಲಾ-ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಇಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡದಂತೆ ನಿಷೇಧ ಹೇರಿರುವ ಕ್ರಮವನ್ನು ಮುಂದುವರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.