ಸಂಸದರಾದ ಬಳಿಕ ತಮ್ಮ ಮೊದಲ ಆದ್ಯತೆ ಏನೆಂದು ತಿಳಿಸಿದ ಡಿ.ಕೆ.ಸುರೇಶ್

Published : May 26, 2019, 03:08 PM IST
ಸಂಸದರಾದ ಬಳಿಕ ತಮ್ಮ ಮೊದಲ ಆದ್ಯತೆ ಏನೆಂದು ತಿಳಿಸಿದ ಡಿ.ಕೆ.ಸುರೇಶ್

ಸಾರಾಂಶ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆಯಾದ ಸಂಸದ ಡಿ.ಕೆ ಸುರೇಶ್ ತನ್ನ ಮೊದಲ ಆದ್ಯತೆಯ ಬಗ್ಗೆ ಮಾತನಾಡಿದ್ದಾರೆ.

ಆನೇಕಲ್‌ :  ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಜನರ ಆಶೀರ್ವಾದ ದೊರೆತಿರುವುದು ನನ್ನ ಸುದೈವ. ಕ್ಷೇತ್ರದ ಕೆರೆಗಳನ್ನು ತುಂಬಿಸಲು ಆದ್ಯತೆ ನೀಡುತ್ತೇನೆ. ಈ ಮೂಲಕ ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಜನರ ಋುಣ ಸಂದಾಯ ಮಾಡುವೆ ಎಂದು ನೂತನ ಸಂಸದ ಡಿ.ಕೆ.ಸುರೇಶ್‌ ಹೇಳಿದರು.

ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರೊಡನೆ ವಿಜಯ ಯಾತ್ರೆ ನಡೆಸಿದರು.

ಜಯೋತ್ಸವ ಪ್ರಾರಂಭವಾದ ಸ್ವಲ್ಪ ಹೊತ್ತಿಗೆ ಮಳೆರಾಯನ ಆರ್ಭಟ ಶುರುವಾಯಿತು. ಆಗ ಸಂಸದ ಸುರೇಶ್‌ ಮತ್ತು ಶಾಸಕ ಬಿ.ಶಿವಣ್ಣ ಸಮೀಪದ ಆನೇಕಲ್‌ನ ರಾಘವೇಂದ್ರ ಭವನದಲ್ಲಿ ಆಶ್ರಯ ಪಡೆದರು. ಅಲ್ಲಿನ ವಿಶಿಷ್ಠ ರುಚಿಯ ದೋಸೆ ಮತ್ತು ಕಾಫಿಯನ್ನು ಸವಿದು ಮಾಲಿಕ ರಾಮದಾಸ್‌ರನ್ನು ಅಭಿನಂದಿಸಿದರು. ಹಾಗೆಯೇ ಕನಕಪುರದ ವಾಸು ಹೋಟಲ್‌ ದೋಸೆಯೂ ಚೆನ್ನಾಗಿರುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಅಧಿವೇಶನ: 89 ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, 6000ಕ್ಕೂ ಹೆಚ್ಚು ಪೊಲೀಸರಿಂದ ಸರ್ಪಗಾವಲು
Karnataka Winter Session: ಬೆಳಗಾವಿ ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿಧೇಯಕಗಳು